ಕನಕದಾಸರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿ: ಬಿ.ಎಲ್. ಘಂಟಿ
Everyone should embody the ideals and principles of Kanakadasa: B.L. Ghanti
ಕನಕದಾಸರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿ: ಬಿ.ಎಲ್. ಘಂಟಿ
ರಾಯಬಾಗ 09: ಕನಕದಾಸರು ಹಲವಾರು ಕೀರ್ತನೆಗಳನ್ನು ಬರೆಯುವುದರ ಮೂಲಕ ಹಾಗೂ ಹರಿಭಕ್ತಿಸಾರ, ನಳ ಚರಿತ್ರೆ, ರಾಮಧಾನ್ಯಚರಿತೆ, ಮೋಹನ ತರಂಗಿನಿ ಮುಂತಾದ ಕೃತಿಗಳನ್ನು ರಚಿಸುವ ಮೂಲಕ ದಾಸ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ದಾಸ ಸಾಹಿತ್ಯದ ಹರಿಕಾರರು ಎಂದು ಸಾಂಸ್ಕೃತಿಕ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಜನಪದ ಕಲಾವಿದ ಬಿ.ಎಲ್. ಘಂಟಿ ಹೇಳಿದರು. ಶನಿವಾರ ತಾಲೂಕಿನ ಹಿಡಕಲ ಗ್ರಾಮದಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ತಾಲೂಕಾ ಘಟಕ ರಾಯಬಾಗ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಭಕ್ತ ಕನಕದಾಸರ 538ನೇ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕನಕದಾಸರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ರಾಯಬಾಗ ತಾಲೂಕು ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ. ಎಸ್. ವಂಟಗೂಡಿ ಅಧ್ಯಕ್ಷತೆಯನ್ನು ವಹಿಸಿದ್ದರು. ಸಚಿನ ಗಡದಿ, ರಾಮು ವಂಟಗೂಡಿ, ಅಮಿತ ಮೆಕ್ಕಳಕಿ, ಕರಿಸಿದ್ದ ವಂಟಗೂಡಿ, ಹಾಲಸಿದ್ಧ ವಂಟಗೂಡಿ, ವಿವೇಕ ವಂಟಗೂಡಿ ಸೇರಿ ಅನೇಕರು ಇದ್ದರು. ರಾಯಬಾಗ: ತಾಲೂಕಿನ ಹಿಡಕಲ ಗ್ರಾಮದಲ್ಲಿ ಭಕ್ತ ಕನಕದಾಸರ ಜಯಂತಿ ಆಚರಿಸಲಾಯಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 