ಎಲ್ಲರೂ ಒಟ್ಟಾಗಿ ಕೋವಿಡ್-19 ವಿರುದ್ಧ ಹೋರಾಡಬೇಕು: ಗಂಭೀರ್
ನವದೆಹಲಿ, ಏ.16, ಕೊರೊನಾ ವೈರಸ್ನಿಂದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಿ ಜಯಿಸಬೇಕು ಎಂದು ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.
ಕೊರೊನಾ ವೈರಸ್ನಿಂದಾಗಿ ಭಾರತ ಸರ್ಕಾರ ರಾಷ್ಟ್ರವ್ಯಾಪಿ ಲಾಕ್ಡೌನ್ ಘೋಷಿಸಿದೆ, ಇದು ಮೇ 3 ರವರೆಗೆ ಇರುತ್ತದೆ. ಗಂಭೀರ್ ತಮ್ಮ ಸಂಸದ ನಿಧಿಯಿಂದ ಒಂದು ಕೋಟಿ ರೂ.ಗಳನ್ನು ಪ್ರಧಾನಿ ಪರಿಹಾರ ನಿಧಿಗೆ ನೀಡಿದ್ದಾರೆ.ಸ್ಟಾರ್ ಸ್ಪೋರ್ಟ್ಸ್ ಶೋ ಕ್ರಿಕೆಟ್ ಕನೆಕ್ಟೆಡ್ ನಲ್ಲಿ ಗಂಭೀರ್, “ನಾವು ಈ ಹೋರಾಟವನ್ನು ಒಂದುಗೂಡಿ ಎದುರಿಸಿದಾಗ ಮಾತ್ರ ಗೆಲ್ಲಬಹುದು. ಪ್ರಮುಖವಾದುದು ಮಾರ್ಗಸೂಚಿಗಳನ್ನು ಅನುಸರಿಸುವುದು. ನಾವು ಮನೆಯಲ್ಲಿಯೇ ಇರಬೇಕು, ಮನೆ ಬಿಟ್ಟು ಹೊರ ಬರಾರದು. ನಾವು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ” ಎಂದಿದ್ದಾರೆ."ನಾವು ಸಹಾಯದ ಬಗ್ಗೆ ಮಾತನಾಡಿದರೆ, ನನ್ನ ದೃಷ್ಟಿಯಲ್ಲಿ, ದಾನ ಮಾಡಲು ಯಾವುದೇ ಮಿತಿಯಿಲ್ಲ. ಒಬ್ಬ ವ್ಯಕ್ತಿಯು ತನ್ನ ಇಚ್ಛೆಯಂತೆ ಒಂದು ರೂಪಾಯಿ ದಾನ ಮಾಡಿದರೆ ಅದು ದೊಡ್ಡ ಸಹಾಯವಾಗಿದೆ" ಎಂದು ತಿಳಿಸಿದ್ದಾರೆ. “ಲಾಕ್ ಡೌನ್ ಸಮಯದಲ್ಲಿ ಸಸ್ಯಗಳು ಮತ್ತು ತೋಟಗಳಲ್ಲಿ ಹುಲ್ಲನ್ನು ಸರಿಯಾಗಿ ಇಟ್ಟುಕೊಳ್ಳುವ ಜವಾಬ್ದಾರಿಯನ್ನು ನನಗೆ ನೀಡಲಾಗಿದೆ. ಆದರೆ ತಮಾಷೆಯೆಂದರೆ, ನಾನು ಮೂರು ದಿನಗಳಿಂದ ಹುಲ್ಲಿಗೆ ನೀರುಣಿಸುತ್ತಿದ್ದೇನೆ ಆದರೆ ಇನ್ನೂ ಅದು ಬೆಳೆಯುತ್ತಿಲ್ಲ” ಎಂದು ಬಿಡುವಿನ ವೇಳೆಯಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ಗೌತಿ ಮಾತನಾಡಿದ್ದಾರೆ.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 