ಬೆಳಗಾವಿ: ಪ್ರತಿಯೊಬ್ಬರು ಸ್ವಯಂ ಉದ್ಯೋಗದತ್ತ ಗಮನಹರಿಸಬೇಕು
ಲೋಕದರ್ಶನ ವರದಿ
ಬೆಳಗಾವಿ 09: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಕೌಶಲ್ಯವನ್ನು ಪಡೆದುಕೊಂಡು ಸ್ವಯಂ ಉದ್ಯೋಗದತ್ತ ಗಮನಹರಿಸಬೇಕು. ಕುಟುಂಬದ ಎಳ್ಗಗೆ ಪುರುಷ ಹಾಗೂ ಮಹಿಳೆ ಇಬ್ಬರೂ ಆಥರ್ಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಮಾತ್ರ ಪ್ರಗತಿ ಸಾಧ್ಯ ಎಂದು ನಿವೃತ್ತ ಆರೋಗ್ಯಾಧಿಕಾರಿ ಎಸ್. ಕೆ. ಅಜ್ಜನ್ನವರ ಅಭಿಪ್ರಾಯಪಟ್ಟರು.
ನಗರದ ಭಾರತ ಕಾಲನಿಯ ಮಹಿಳಾ ಕಲ್ಯಾಣ ಸಂಸ್ಥೆ ಸಭಾಗೃಹದಲ್ಲಿ ಎಫ್. ವಿ. ಟಿ. ಆರ್. ಎಸ್ ಬೆಂಗಳೂರು ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ, ಬೆಳಗಾವಿ ಇವರುಗಳ ಸಂಯುಕ್ತಾಶ್ರಯದಲ್ಲಿ ್ಲ ನಿರುದ್ಯೋಗಿ ಯುವತಿಯರಿಗಾಗಿ ಆಯೋಜಿಸಿದ್ದ ಆರು ತಿಂಗಳ ಉಚಿತ ಹೋಂ ನಸರ್ಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ತರಬೇತಿ ಪೂರೈಸಿದ ಶಿಬಿರಾಥರ್ಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಇನ್ನೊರ್ವ ಅತಿಥಿ ಎಂ. ಎಸ್. ಚೌಗಲಾ ಮಾತನಾಡಿ ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗವಕಾಶ ಲಭ್ಯತೆ ಇದೆ. ಹಂತ ಹಂತವಾಗಿ ಶಿಭಿರಾಥರ್ಿಗಳು ಪ್ರಾಯೋಗಿಕ ಜ್ಞಾನ ಹೆಚ್ಚಿಸುವ ಮೂಲಕ ಉತ್ತಮ ಸಂಬಳ ಪಡೆಯಬೇಕೆಂದರು.
ಯೋಜನಾ ನಿದರ್ೇಶಕಿ ಸುರೇಖಾ ಪಾಟೀಲ ಮಾತನಾಡಿ ಜೀವನದಲ್ಲಿ ಯಶಸ್ಸು ಸಾಧಿಸಲು ಶಕ್ತಿ ಮತ್ತು ಉತ್ಸಾಹವಿರಬೇಕು. ಗುರಿ ಮುಟ್ಟಲು ದೃಢ ನಿಷ್ಠೆಯೊಂದಿಗೆ ಮುನ್ನಡೆಯಬೇಕು ಹಿರಿಯ ನಾಗರಿಕರ ಸೇವೆ ಮಹತ್ವದಾಗಿದೆ ಎಂದು ಹೇಳಿದರು.
ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದಶರ್ಿ ವೈಜಯಂತಿ ಚೌಗಲಾ ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಿಳೆಯರು ವಿವಿಧ ವೃತ್ತಿಗಳಲ್ಲಿ ನಿರತರಾಗಿ ಕೈ ಜೋಡಿಸಿದಾಗ ಮಾತ್ರ ಕುಟುಂಬದ ಆಥರ್ಿಕ ಪ್ರಗತಿ ಸಾಧ್ಯ ಮಹಿಳೆಯರು ಸ್ವಯಂ ಉದ್ಯೋಗಗಳಲ್ಲಿ ತೊಡಗುವ ಅನಿವಾರ್ಯತೆ ಇದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯೋಜಕ ಎಂ ಎಂ ಗಡಗಲಿ, ಶಶಿಕಲಾ ಕಟ್ಟಿಮನಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 