ಪ್ರತಿಯೊಬ್ಬರು ಆರೋಗ್ಯದಾಯಕ ಜೀವನ ನಡೆಸಬೇಕು : ದಿವಾಣಿ ನ್ಯಾಯಾಧೀಶ
Everyone should lead a healthy life: Civil Judge
ರಾಯಬಾಗ 16: ನಮಗೆ ರೋಗ ಬರುವ ಮುಂಚಿತ ನಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ರೋಗ ಬರದಂತೆ ನೋಡಿಕೊಂಡು ಆರೋಗ್ಯದಾಯಕ ಜೀವನ ನಡೆಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.ಗುರುವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ ಮತ್ತು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಜನರ ಜೀವ ಉಳಿಸುವ ವೈದ್ಯರ ಸೇವೆ ಸಮಾಜದಲ್ಲಿ ಅತ್ಯಂತ ಶ್ರೇಷ್ಠವಾಗಿದೆ.
ಪ್ರತಿಯೊಬ್ಬರು ಪ್ರತಿ ವರ್ಷ ನಮ್ಮ ದೇಹದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದರು.ಬಿಮ್ಸ್ ವೈದ್ಯ ಡಾ.ಎ.ಎಸ್.ನಾಗಲಿಕರ ಮಾತನಾಡಿ, ಬಿಮ್ಸ್ ವತಿಯಿಂದ ಪ್ರಥಮ ಬಾರಿಗೆ ನ್ಯಾಯಾಲಯದ ಆವರಣದಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆಸುತ್ತಿರುವ ನಮಗೆ ಹೆಮ್ಮೆಯಾಗಿದೆ. ಆರೋಗ್ಯವಂತ ಶರೀರ ಹೊಂದಲು ಮನೆಯ ಊಟ ಮಾಡುವುದು ಉತ್ತಮ. ಮನುಷ್ಯ ಸತ್ತ ನಂತರ ಆಸ್ಪತ್ರೆಗೆ ದೇಹ ದಾನ ಮಾಡಿದರೆ, ಅನೇಕ ಅಂಗಾಂಗ ವೈಕಲ್ಯ ಇರುವ ಜೀವಗಳನ್ನು ಉಳಿಸಬಹದು. ಪ್ರತಿಯೊಬ್ಬರು ಈ ಶಿಬಿರದ ಪ್ರಯೋಜನ ಪಡೆದು ಆರೋಗ್ಯದಾಯಕ ಜೀವನ ನಡೆಸಬೇಕೆಂದರು.
ಅಧ್ಯಕ್ಷತೆಯನ್ನು ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರೀಯಾ ಭಟ್ಟಡ ವಹಿಸಿದ್ದರು.ಕಾರ್ಯಕ್ರಮದಲ್ಲಿ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ದಾನಪ್ಪ, ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಉಮೇಶ ಪೋಳ, ಸಿಪಿಐ ಎಮ್.ಎಮ್.ಡಪ್ಪಿನ, ಬೆಳಗಾವಿ ಬಿಮ್ಸ್ ನಾಮ ನಿರ್ದೇಶನ ಸದಸ್ಯ ಆರ್.ಎಸ್.ಶಿರಗಾಂವೆ, ವೈದ್ಯರಾದ ಡಾ.ಸಿ.ಬಿ.ಪಾಟೀಲ, ಡಾ.ರವಿ ಅಜೂರ, ಡಾ.ಸುಕುಮಾರ ನಾವ್ಹಿ, ಡಾ.ಪ್ರಶಾಂತ, ತಾ.ಪಂ.ಇಒ ಅರುಣ ಮಾಚಕನೂರ, ಬಿ.ಸಿ.ಎಮ್ ಅಧಿಕಾರಿ ಕಲ್ಪನಾ ಕಾಂಬಳೆ, ವಕೀಲರ ಸಂಘದ ಉಪಾಧ್ಯಕ್ಷ ಕೆ.ಎಲ್.ಕೆರೂರೆ, ಕಾರ್ಯದರ್ಶಿ ಆರ್.ಎಸ್.ಹಳಪ್ಪಗೋಳ, ಸಹ ಕಾರ್ಯದರ್ಶಿ ಎಮ್.ಬಿ.ಬಂತೆ, ಖಜಾಂಚಿ ಸವಿತಾ ಸಂಗೋಟೆ, ವಿನೋದ ಚವ್ಹಾನ, ಮಲ್ಲಿಕ ಕೊರಬು, ಬಿಮ್ಸ್ ವೈದ್ಯರು, ವಕೀಲರು, ಸರ್ಕಾರಿ ನೌಕರರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 