ಪರಿಸರ ಸಂಪತ್ತು ಹೆಚ್ಚಲು ಪ್ರತಿಯೊಬ್ಬರು ಗಿಡ ನೆಡಿ: ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಆಕರ್ಷ ಎಂ
ಚನ್ನಮ್ಮನ ಕಿತ್ತೂರು 05: ಪ್ರತಿಯೊಬ್ಬರ ತಮ್ಮ ಹುಟ್ಟು ಹಬ್ಬದ ದಿನದಂದು ಕೇವಲ ಒಂದು ಗಿಡವನ್ನು ನೆಡುತ್ತಾ ಮುಂದೆ ಸಾಗಿದಲ್ಲಿ ನಾಡಿನ ಪರಿಸರ ಸಂಪತ್ತನ್ನು ಹೆಚ್ಚಿಸಬಹುದೆಂದು ಇಲ್ಲಿಯ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಆಕರ್ಷ ಎಂ ಹೇಳಿದರು.
ವಿಶ್ವ ಪರಿಸರ ದಿನಾಚರಣೆಯ ನಿಮಿತ್ಯ ಬುಧವಾರ ಸಮೀಪದ ಡೊಂಬರಕೊಪ್ಪ ಗ್ರಾಮದ ಹಿರಿಯ ಪ್ರಾಥಮಿಕ ಸಕರ್ಾರಿ ಶಾಲೆಯಲ್ಲಿ ಗಿಡಗಳನ್ನು ನೆಟ್ಟು ಮಾತನಾಡಿದ ಅವರು, ಈಗೀನ ಯುಗದಲ್ಲಿ ಕಣ್ಣಾಯಿಸಿದಲೆಲ್ಲ ಕಾಂಕ್ರೀಟ್ ಕಾಡು ಕಂಡು ಬರುತ್ತಿದ್ದು ಈ ಬೆಳವಣಿಗೆ ಒಳ್ಳೆಯದಲ್ಲ. ಒಂದು ವೇಳೆ ಇದೆ ಪರಿಸ್ಥಿತಿ ಮುಂದುವರೆದಲ್ಲಿ ಉಸಿರಾಡಲು ಶುದ್ಧ ಗಾಳಿಯೂ ಸಿಗದೆ ಜೀವ ಸಂಕುಲವೆ ಪರದಾಡುವ ಪರಿಸ್ಥಿತಿ ಬಂದೂದಗುತ್ತದೆ ಕಾರಣ ಯುವಕರು ಹಾಗೂ ನಾಗರಿಕರು ತಮ್ಮ ತಮ್ಮ ಹುಟ್ಟು ಹಬ್ಬದ ದಿನದಂದು ಕೇವಲ ಒಂದು ಗಿಡವನ್ನು ನೆಟ್ಟು ಅದನ್ನು ಸಂರಕ್ಷಿಸುವ ಜವಾಬ್ದಾರಿ ಹೊಂದಿದಲ್ಲಿ ಮತ್ತೆ ಹಸಿರನ್ನು ಕಾಣಬಹುದಾಗಿದೆ ಎಂದು ಅಭಿಪ್ರಾಯ ಪಟ್ಟರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ವಿಶ್ವನಾಥ ಬಿಕ್ಕಣ್ಣವರ, ನ್ಯಾಯವಾದಿಗಳಾದ ಮೋಹನ ಹಂಚಿನಮನಿ, ಅಕ್ಷಯ ವಾಲಿ,ಬಸವರಾಜ ಸವದತ್ತಿ, ಉಪವಲಯ ಅರಣ್ಯಾಧಿಕಾರಿ ಎಸ್.ಎ. ಮಗದುಮ್ಮ, ಮುಖ್ಯೋಪಾಧ್ಯಾಯ ಎಸ್.ಬಿ.ಹುಬ್ಬಳ್ಳಿ, ಪಕ್ಕಿರಪ್ಪ ಪಾಗಾದ ಮಡಿವಾಳಪ್ಪ ಗುದಗಿ, ಪ್ರಕಾಶ ಬಡಿಗೇರ ಸೇರಿದಂತೆ ಇತರರು ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 