ಜಾತಿ ಸಮೀಕ್ಷೆಗಾಗಿ ಎಲ್ಲರೂ ಮಾಹಿತಿ ನೀಡಿ ಸಹಕರಿಸಿ: ತಹಶೀಲ್ದಾರ ಮುಂಜೆ
Everyone should provide information and cooperate for the caste survey: Tahsildar Munje
ಲೋಕದರ್ಶನ ವರದಿ
ಜಾತಿ ಸಮೀಕ್ಷೆಗಾಗಿ ಎಲ್ಲರೂ ಮಾಹಿತಿ ನೀಡಿ ಸಹಕರಿಸಿ: ತಹಶೀಲ್ದಾರ ಮುಂಜೆ
ರಾಯಬಾಗ, 05 : ಸರ್ಕಾರದ ಆದೇಶದ ಮೇರೆಗೆ ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗಾಗಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ತಾಲೂಕಿನ ಎಲ್ಲ ಜನರು ಮಾಹಿತಿ ನೀಡಿ ಸಹಕರಿಸಬೇಕೆಂದು ತಹಶೀಲ್ದಾರ ಸುರೇಶ ಮುಂಜೆ ಹೇಳಿದರು.
ಸೋಮವಾರ ಪಟ್ಟಣದ ಸಾಯಿನಗರದಲ್ಲಿ ಸುಧೀರ ಕಳ್ಳೆ ಅವರ ಮನೆಗೆ ಸಮೀಕ್ಷೆ ತಂಡದೊಂದಿಗೆ ಭೇಟಿ ನೀಡಿ ಮಾಹಿತಿ ಪಡೆದು, ದತ್ತಾಂಶ ಸಂಗ್ರಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಾತಿಗಳ ಸಮಗ್ರ ದತ್ತಾಂಶ ಸಂಗ್ರಹಕ್ಕಾಗಿ ಮನೆಗಳಿಗೆ ಬರುವ ಶಿಕ್ಷಕರಿಗೆ ನಿಖರವಾಗಿ ಎಲ್ಲ ಮಾಹಿತಿಯನ್ನು ಸರಿಯಾಗಿ ನೀಡಿ, ಸಮೀಕ್ಷೆ ಯಶಸ್ವಿಗೆ ಸಹಕರಿಬೇಕು. ದತ್ತಾಂಶಗಳನ್ನು ಆ್ಯಂಡ್ರಾಯ್ಡ್ ಆ್ಯಪ್ ಮೂಲಕ ಮೊಬೈಲ್ಗಳಲ್ಲಿ ಸಂಗ್ರಹಿಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೇ, ಸಮೀಕ್ಷೆಗೆ ಬರುವ ಶಿಕ್ಷಕರಿಗೆ ಸಂಪೂರ್ಣವಾದ ನಿಖರ ಮತ್ತು ಸತ್ಯವಾದ ಮಾಹಿತಿ ನೀಡುವಂತೆ ಕೋರಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಎಸ್.ಚಂದರಗಿ, ಶಿಕ್ಷಕಿ ಶ್ರೀದೇವಿ ಪಾಟೀಲ, ತಾರಾಬಾಯಿ ಕಳ್ಳೆ, ಸುಧೀರ ಕಳ್ಳೆ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 