ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
Excellent performance of B.Com students of Government Degree College

ವಿಜಯಪುರ 04: ಸಾಧನೆಗೈಯ್ಯುವವರಿಗೆ ಬಡತನ ಎಂದೂ ಅಡ್ಡಿ ಬರುವುದಿಲ್ಲ ಮತ್ತು ಸತತ ಪ್ರಯತ್ನ, ಕಠಿಣ ಪರಿಶ್ರಮ ಮತ್ತು ದಿಟ್ಟ ಛಲವೊಂದಿದ್ದರೆ ಎಂತಹ ಸಾಧನೆಯನ್ನು ಮಾಡಬಹುದೆಂಬುದು ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಿ.ಕಾಂ ಪದವಿ ಪರೀಕ್ಷೆಯಲ್ಲಿ ಪಡೆದ ಫಲಿತಾಂಶದಿಂದ ಸಾಬೀತಾಗಿದೆ. ಈ ನಿಟ್ಟಿನಲ್ಲಿ ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಶ್ರೀದೇವಿ ಜಾಲವಾದ (ಸಿಂದಗಿ ತಾಲೂಕಿನ ಇಕ್ಕನಗುತ್ತಿ ಗ್ರಾಮ) ಇವಳು ಶೇ. 93.8 ಅಂಕ ಪಡೆದು ಪ್ರಥಮ ಕಾಲೇಜಿಗೆ ಸ್ಥಾನ, ಪ್ರಿಯಾಂಕಾ ಮಹೀಂದ್ರಕರ (ವಿಜಯಪುರ ನಗರ) ಇವಳು ಶೇ. 92.10 ಅಂಕ ಗಳಿಸಿ ದ್ವೀತಿಯ ಸ್ಥಾನ ಹಾಗೂ ಸುದೀಪ ನಾವಿ (ಇಂಡಿ ತಾಲೂಕಿನ ಚವಡಿಹಾಳ ಗ್ರಾಮ) ಈತನು ಶೇ. 91.90 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿನಿ ಶ್ರೀದೇವಿ ಜಾಲವಾದಿ ನಮ್ಮ ಕಾಲೇಜು ಯಾವ ಖಾಸಗಿ ಕಾಲೇಜುಗಳಿಗಿಂತ ಕಮ್ಮಿಯಿಲ್ಲ. ವಿದ್ಯಾರ್ಥಿ ಕೇಂದ್ರಿತ ಬೋಧನೆ-ಕಲಿಕೆ, ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶೈಕ್ಷಣಿಕ ಪರಿಸರವನ್ನು ಹೊಂದಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುವಲ್ಲಿ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರು ಶ್ರಮಿಸುತ್ತಿದ್ದಾರೆ. ನನ್ನಂತಹ ಅದೇಷ್ಟೋ ವಿದ್ಯಾರ್ಥಿಗಳಿಗೆ ಈ ಕಾಲೇಜು ಜ್ಞಾನ ದೇಗುಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದಳು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ವಿಜಯಪುರ ನಗರ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಬಸನಗೌಡ. ಆರ್. ಪಾಟೀಲ (ಯತ್ನಾಳ) ಇವರು, ಕಾಲೇಜಿನ ಸಿ.ಡಿ.ಸಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಡಾ. ಎ.ಐ.ಹಂಜಗಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಂ.ಎಸ್.ಖೊದ್ನಾಪೂರ, ಪ್ರಾಧ್ಯಾಪಕ ಡಾ. ಐ.ಎಸ್.ಶಿವಶರಣರ, ಪ್ರೊ. ಆರ್.ಐ.ಜೋಗೂರ, ಪ್ರೊ. ವ್ಹಿ.ಆರ್. ಕಬಾಡೆ ಹಾಗೂ ಕಾಲೇಜಿನ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 