ಲಾಕ್ ಡೌನ್ ನಿಂದ ಕೃಷಿ ಮಳಿಗೆಗಳು, ಚಹಾ ಕೈಗಾರಿಕೆಗಳಿಗೆ ವಿನಾಯಿತಿ: ಕೇಂದ್ರದ ಆದೇಶ
ನವದೆಹಲಿ, ಏ 4, ಕೋವಿಡ್ 19 ಹಿನ್ನೆಲೆಯಲ್ಲಿ ದೇಶಾದ್ಯಂತ ಘೋಷಿಸಿರುವ ಲಾಕ್ ಡೌನ್ ನಿಂದ ಕೃಷಿ ಸಂಬಂಧಿತ ಅಂಗಡಿಗಳು, ಚಹಾ ಕೈಗಾರಿಕೆ ಮತ್ತಿತರ ಕೆಲ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಈ ಕುರಿತು ನಾಲ್ಕನೇ ಹೆಚ್ಚುವರಿ ವಿನಾಯಿತಿ ಮಾರ್ಗಸೂಚಿ ಹೊರಡಿಸಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾಳ್ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಹೆದ್ದಾರಿಗಳಲ್ಲಿ ಪೆಟ್ರೋಲ್ ಬಂಕ್ ಗಳು, ಸರಕು ಸಾಗಾಣೆ ವಾಹನಗಳ ದುರಸ್ತಿ ಅಂಗಡಿಗಳು, ಚಹಾ ಕೈಗಾರಿಕೆಗೆ ವಿನಾಯಿತಿ ಕೊಡಲಾಗಿದೆ. ಚಹಾ ಪ್ಲಾಂಟೇಷನ್ ಗಳಲ್ಲಿ ಗರಿಷ್ಠ ಶೇ 50 ರಷ್ಟು ಮಂದಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ವಿನಾಯಿತಿ ನೀಡಿರುವ ಸೇವೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಸಹ ಸಲಹೆ ಮಾಡಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 