ಈಶಾನ್ಯ ರಾಜ್ಯಗಳಲ್ಲಿ ಮುಂಗಡ ತೆರಿಗೆ ಪಾವತಿ ಗಡುವು ಡಿ 31 ಕ್ಕೆ ವಿಸ್ತರಣೆ
ನವದೆಹಲಿ, ಡಿ 16 ಈಶಾನ್ಯ ರಾಜ್ಯಗಳಲ್ಲಿ ಮುಂಗಡ ತೆರಿಗೆ
(ಅಡ್ವಾನ್ಸ್ ಟ್ಯಾಕ್ಸ್) ಪಾವತಿಗೆ ಕೊನೆ ದಿನ ಈ ತಿಂಗಳಾಂತ್ಯದ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರೀಯ
ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತಿಳಿಸಿದೆ. ಪ್ರಸಕ್ತ
ಹಣಕಾಸು ವರ್ಷದ ಆದಾಯ ತೆರಿಗೆ ಲೆಕ್ಕಾಚಾರಕ್ಕೆ ಸಂಬಂಧಿಸಿದಂತೆ ಪಾವತಿಸಲಾಗುವ ಮೂರನೇ ಕಂತಿನ ಮುಂಗಡ
ತೆರಿಗೆಯ ಕೊನೆ ದಿನವನ್ನು ಡಿ 31 ಕ್ಕೆ ವಿಸ್ತರಿಸಲಾಗಿದೆ ಎಂದು ಸಿಬಿಡಿಟಿ ತಿಳಿಸಿದೆ. ಮೂರನೇ ಕಂತಿನ ಮುಂಗಡ ತೆರಿಗೆ ಪಾವತಿಸಲು ಡಿ 15 ಕೊನೆ ದಿನವಾಗಿದೆ.
ಆದರೆ ಈಶಾನ್ಯ ರಾಜ್ಯಗಳಲ್ಲಿ ರಾಷ್ಟ್ರೀಯ ಪೌರತ್ ನೋಂದಣಿ. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ
ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯವಸ್ತವಾಗಿದ್ದು ತೆರಿಗೆ
ಪಾವತಿಗಾರರಿಗೆ ಅನುಕೂಲ ಮಾಡಿಕೊಡಲು ದಿನಾಂಕ ವಿಸ್ತರಿಸಲಾಗಿದೆ ಎಂದು ಸಿಬಿಡಿಟಿ ಪ್ರಕಟಣೆ ತಿಳಿಸಿದೆ. ಎಲ್ಲ ಹಣಕಾಸು ವರ್ಷಗಳಲ್ಲಿ ಜೂನ್ 15, ಸೆಪ್ಟೆಂಬರ್
15, ಡಿಸೆಂಬರ್ 15 ಮತ್ತು ಮಾರ್ಚ್ 15 ರೊಳಗೆ ವರ್ಷಕ್ಕೆ
ನಾಲ್ಕು ಕಂತುಗಳಲ್ಲಿ ಮುಂಗಡ ತೆರಿಗೆ ಪಾವತಿ ಮಾಡಬೇಕಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 