ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ತೆರಿಗೆ ಮಿತಿಯ ನಿರೀಕ್ಷೆ
ಬೆಂಗಳೂರು, ಜ.29, ಕೇಂದ್ರ ಸರ್ಕಾರವು 2020-21 ಸಾಲಿನ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದು ಫೆಬ್ರವರಿ 1 ರಂದು ಬಜೆಟ್ ಮಂಡಿಸಲಿದೆ. ಸರ್ಕಾರದ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ ಎಂದು ಗ್ರೋವ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗು ಸಿಒಒ ಹರ್ಷ್ ಜೈನ್ ತಿಳಿಸಿದ್ದಾರೆ. ವೈಯಕ್ತಿಕ ಆದಾಯ ತೆರಿಗೆ ಮಿತಿಯಲ್ಲಿ ಕಡಿತ ಅಥವಾ ಆದಾಯ ಸ್ಲ್ಯಾಂಬ್ ಗಳಲ್ಲಿ ಬದಲಾವಣೆಯ ನಿರೀಕ್ಷೆ ಈ ಸಲದ ಬಜೆಟ್ ಮೇಲೆ ಇದೆ. ಇದರಿಂದ ಜನರ ಖರೀದಿಸುವ ಶಕ್ತಿ ಹೆಚ್ಚುತ್ತದೆ ಮತ್ತು ಬೆಡಿಕೆ ಹೆಚ್ಚುತ್ತದೆ.
ಗ್ರಾಮೀಣ ಭಾಗದಲ್ಲಿ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಯೋಜನೆಯನ್ನು ಪರಿಚಯಿಸಬೇಕು. ಇದರಿಂದ ಗ್ರಾಮೀಣ ಭಾಗದಲ್ಲಿ ಆರ್ಥಿಕ ಚಟುವಟಿಕೆ ಚಿಗುರೊಡೆಯುತ್ತದೆ. ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತನ್ನು ನೀಡುವ ಅವಶ್ಯಕತೆ ಈ ಬಜೆಟ್ ನಲ್ಲಿ ಇದೆ. ದೇಶದ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಸರ್ಕಾರವು ಈ ಬಜೆಟ್ ನಲ್ಲಿ ಸೂಕ್ತ ಯೋಜನೆಗಳನ್ನು ಘೋಷಿಸಿ ಆರ್ಥಿಕತೆಗೆ ಒತ್ತು ನೀಡಬೇಕಾಗಿದೆ. ಷೇರು ಮಾರುಕಟ್ಟೆಯಲ್ಲೂ ಸುಧಾರಣೆಯ ಅವಶ್ಯಕತೆ ಇದೆ ಎಂದು ಹರ್ಷ್ ಜೈನ್ ಹೇಳಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 