ಬಸ್ ಪ್ರಯಾಣ ದುಬಾರಿ ಖಂಡನೆ
Expensive condemnation of bus travel
ಬಸ್ ಪ್ರಯಾಣ ದುಬಾರಿ ಖಂಡನೆ
ಹೂವಿನಹಡಗಲಿ. 03 : ರಾಜ್ಯ ಸರ್ಕಾರ ಶೇ 15 ರಷ್ಟು ಬಸ್ ದರ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದೆ.ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ ತಮ್ಮ ಸಾವಿರಾರು ಕೋಟಿ ರೂಪಾಯಿಗಳ ಆಸ್ತಿಯನ್ನು ಮಾರಾಟ ಮಾಡಿ ಗ್ಯಾರಂಟಿ ಯೋಜನೆಗೆ ಹಣ ನೀಡಲಿ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಮುಖಂಡ ಎಂ ಬಿ ಬಸವರಾಜ ಆಗ್ರಹಿಸಿದರು. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ರಾಜ್ಯದ ಖಜಾನೆಯನ್ನು ಬರಿದು ಮಾಡಿ ಬಡ ದುಡಿಯುವ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ನೀಡಿದೆ.ಶಕ್ತಿ ಗ್ಯಾರಂಟಿ ಯೋಜನೆಯಿಂದ ರಾಜ್ಯ ಸಾರಿಗೆ ನಿಗಮಗಳನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ರಾಜ್ಯ ಸರಕಾರ ಜನರ ಜೀವನದ ಜೋತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು. ಸದ್ಯಕ್ಕೆ ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ.ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ವಿರುದ್ಧ ರೋಸಿ ಹೋಗಿದ್ದಾರೆ ಬರಿ ಭ್ರಷ್ಟಾಚಾರದಲ್ಲೇ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ತಮ್ಮ ಕುರ್ಚಿಗಾಗಿಯೇ ಕಾದಾಟ ನಡೆಸಿದ್ದಾರೆ.ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ನವರು ತಮ್ಮ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಯನ್ನೇ ತಮ್ಮ ಅಭಿವೃದ್ಧಿ ಎಂದು ಬಿಂಬಿಸಿಕೋಳ್ಳುವ ರಾಜ್ಯ ಸರ್ಕಾರ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಜನರಿಗೆ ದುಬಾರಿ ದುನಿಯಾ ಮಾಡಿ ಜನತೆಯನ್ನು ಕಷ್ಟಕ್ಕೆ ಸಿಲುಕಿಸಿದ್ದಾರೆ. ಎಂದು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 