ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡುವ ಸಮಯ ವಿಸ್ತರಣೆ: ಪ್ರಧಾನಿ ಶ್ಲಾಘನೆ
ನವದೆಹಲಿ 30: ಜಾಗತಿಕ ಗಮನ ಸೆಳೆದಿರುವ ಹತ್ತು ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡುವ ಸಮಯವನ್ನು ವಿಸ್ತರಿಸಿರುವ ಪ್ರವಾಸೋದ್ಯಮ ಸಚಿವಾಲಯದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಮಯ ಹೆಚ್ಚಿಸಿರುವುದರಿಂದ ಹೆಚ್ಚು ಹೆಚ್ಚು ಜನ ಈ ಸ್ಥಳಗಳಿಗೆ ಭೇಟಿ ನೀಡಲು ಹಾಗೂ ಭಾರತದ ಭವ್ಯ ಇತಿಹಾಸ ಅರಿಯಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದ ವಿಜಯಪುರದ ಐತಿಹಾಸಿಕ ಗೋಲ್ ಗುಂಬರ್ ಸೇರಿ ಹತ್ತು ಸ್ಮಾರಕಗಳನ್ನು ಸಾರ್ವಜನಿಕರು ವೀಕ್ಷಿಸಲು ರಾತ್ರಿ 9 ಗಂಟೆ ತನಕ ಸಮಯ ವಿಸ್ತರಿಸಿ ಪ್ರವಾಸೋದ್ಯಮ ಸಚಿವಾಲಯ ನಿನ್ನೆ ಆದೇಶ ಹೊರಡಿಸಿತ್ತು.
ದೆಹಲಿಯ ಸಫ್ತಾರ್ ಜಂಗ್ ಹಾಗೂ ಹುಮಾಯೂನ್ ಗುಮ್ಮಟಗಳು, ಒಡಿಶಾದ ರಾಜ ರಾಣಿ ದೇವಾಲು ಸಂಕೀರ್ಣ, ಮಧ್ಯ ಪ್ರದೇಶದ ದುಲಾದೇವ್ ಮಂದಿರ, ಹರಿಯಾಣದ ಶೇಕ್ ಚಿಲ್ಲಿ ಗುಮ್ಮಟ, ಮಹಾರಾಷ್ಟ್ರದ ಮಾಕರ್ಾಂಡ ದೇವಾಲಯ ಸಮೂಹ, ಗುಜರಾತ್ನ ರಾಣಿ-ಕಿ-ವಾವ್ ಹಾಗೂ ಉತ್ತರ ಪ್ರದೇಶದ ಮನ್ ಮಹಲ್ ವೈದ್ ಶಾಲಾ ಸ್ವಾರಕಗಳನ್ನು ಬೆಳಗ್ಗೆ 9 ರಿಂದ ಸಂಜೆ 5.30ರವರೆಗೆ ಮಾತ್ರ ವೀಕ್ಷಣೆಗೆ ಅವಕಾಶವಿತ್ತು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 