ಚಿಕ್ಕಮಗಳೂರಿನಲ್ಲಿ ಮೂರು ದಿನಗಳ ದತ್ತ ಜಯಂತಿ ಜಿಲ್ಲಾಡಳಿತ ದಿಂದ ವ್ಯಾಪಕ ಬಂದೋಬಸ್ತ್
ಚಿಕ್ಕಮಗಳೂರು, ಡಿ 8 : ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಇದೇ 10 ರಿಂದ ಆಯೋಜಿಸಿರುವ ಮೂರು ದಿನಗಳ ದತ್ತ ಜಯಂತಿ ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಚಿಕ್ಕಮಗಳೂರು ಜಿಲ್ಲಾಡಳಿತ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಬಗಡಿ ಗೌತಮ್ ಜಾರಿಗೊಳಿಸಿದ್ದಾರೆ. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ 35 ಚೆಕ್ ಪೋಸ್ಟ್ ಗಳನ್ನು ಆರಂಭಿಸಲು ಸೂಚನೆ ಹೊರಡಿಸಿದ್ದು, ಸೋಮವಾರ ಮಧ್ಯರಾತ್ರಿಯಿಂದಲೇ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಕೆ.ಎಂ ರೋಡ್, ಐಜಿ ರೋಡ್, ಆರ್ ಜಿ ರೋಡ್, ಬಸವನಹಳ್ಳಿ ರಸ್ತೆಗಳಲ್ಲಿರುವ ಕಾಯಂ ಅಂಗಡಿ ಮಳಿಗೆಗಳನ್ನು ಕಾರ್ಯಕ್ರಮದ ಕೊನೆಯ ದಿನವಾದ ಡಿಸೆಂಬರ್ 12 ರಂದು ಮುಚ್ಚಿಸಲಾಗುವುದು. ಅಲ್ದೂರು ಪಟ್ಟಣ ಹಾಗೂ ಹಂಡಿ,ಭೂತನ ಕಾಡು ಹಾಗೂ ವಸ್ತಾರೆ ಸಂಪರ್ಕಿಸುವ ರಸ್ತೆಗಳಲ್ಲಿನ ಅಂಗಡಿ ಮುಂಗಟ್ಟು ಸಹ ಮುಚ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಗಡಿ ಗೌತಮ್ ಶನಿವಾರ ನಡೆಸಿದ ಸುದ್ದಿ ಗೋಷ್ಟಿಯಲ್ಲಿ ತಿಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 