ವಿದ್ಯಾರ್ಥಿಯ ಯಶಸ್ವಿ ಬದುಕಿಗೆ ಪಠ್ಯೇತರ ಚಟುವಟಿಕೆಗಳು ಪೂರಕ: ಡಾ. ಸತೀಶ ಕುಲಕರ್ಣಿ
Extracurricular activities are essential for a student's successful life: Dr. Satish Kulkarni
ಲೋಕದರ್ಶನ ವರದಿ
ಹಾವೇರಿ, 19: ವಿದ್ಯಾರ್ಥಿಗಳ ಓದು ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಿದಾಗ ಉಜ್ವಲ ಭವಿಷ್ಯ ನಿರ್ಮಾಣವಾಗುತ್ತದೆ ಎಂದು ಹಿರಿಯ ಸಾಹಿತಿ ಡಾ. ಸತೀಶ ಕುಲಕರ್ಣಿ ಅಭಿಪ್ರಾಯಪಟ್ಟರು.
ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಜಿ. ಎಚ್. ಮಹಾವಿದ್ಯಾಲಯದಲ್ಲಿ ಜರುಗಿದ 2025-26 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಜೀವನದಲ್ಲಿ ಅನೇಕ ತಿರುವುಗಳು ಸಹಜವಾಗಿ ಬರುತ್ತವೆ. ವಿದ್ಯಾರ್ಥಿಗಳು ಅವುಗಳನ್ನು ಸವಾಲಾಗಿ ಸ್ವೀಕರಿಸಿ ಸಾಧನೆಯ ಮೆಟ್ಟಿಲುಗಳನ್ನು ಪರಿಶ್ರಮ, ಶ್ರದ್ಧೆ, ಕ್ರಿಯಾಶೀಲತೆಯ ಮೂಲಕ ಹತ್ತಬೇಕಾಗುತ್ತದೆ. ಕೇವಲ ಅಂಕಪಟ್ಟಿಗೆ ಅಂಟಿಕೊಳ್ಳದೇ ಉತ್ತಮ ಪ್ರಜೆಗಳಾಗಿ ನಿರ್ಮಾಣವಾಗುತ್ತ ಯುವಕರು ಚಿತ್ತ ಹರಿಸಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೆ.ಎಲ್.ಇ. ಸಂಸ್ಥೆಯ ನಿರ್ದೇಶಕ ಎಂ. ಸಿ. ಕೊಳ್ಳಿ ಮಾತನಾಡಿ ವಿದ್ಯಾರ್ಥಿಗಳ ಹಿತವನ್ನು ಕಾಯುವಲ್ಲಿ ಕೆ.ಎಲ್.ಇ. ಸಂಸ್ಥೆಯು ತನ್ನ ಬದ್ಧತೆಯನ್ನು ಯಾವತ್ತೂ ಪ್ರದರ್ಶಿಸಿದೆ. ಈ ಹಿನ್ನಲೆಯಲ್ಲಿ ಜಿ. ಎಚ್. ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ನಿಜಕ್ಕೂ ಅಭಿನಂದನೀಯ ಮತ್ತು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 