ಪ್ರಚೋದನಾಕಾರಿ ಹೇಳಿಕೆ: ಎಐಎಂಐಎಂ ನಾಯಕನ ವಿರುದ್ಧ ಪ್ರಕರಣ
ಕಲಬುರಗಿ, ಫೆ 22 : ಇತ್ತೀಚೆಗೆ ಇಲ್ಲಿ ನಡೆದ ಸಿಎಎ ವಿರೋಧಿ ಸಭೆಯಲ್ಲಿ ಪ್ರಚೋದನಾಕಾರಿ, ಹಿಂದೂ ಸಮುದಾಯದ ವಿರುದ್ಧ ಮಾಡಿದ ಟೀಕೆಗಾಗಿ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಐಎಂ) ನಾಯಕ ವಾರಿಸ್ ಪಠಾಣ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ .ಪೊಲೀಸ್ ಮೂಲಗಳ ಪ್ರಕಾರ, ಈ ಕುರಿತು ಮಹಿಳಾ ವಕೀಲರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಐಎಂಐಎಂ ನಾಯಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.ಘಟನೆಯನ್ನು ಗಂಬೀರವಾಗಿ ಪರಿಗಣಿಸಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಘಟನೆಯ ಬಗ್ಗೆ ತನಿಖೆ ಮಾಡಿ ವಿವಿರ ವರದಿ ಸಲ್ಲಿಸುವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ್ದರು.ಕಳೆದ 15 ರಂದು ನಗರದಲ್ಲಿ ನಡೆದ ಸಭೆಯಲ್ಲಿ ಎಐಎಂಐಎಂ ನಾಯಕ ತಮ್ಮ ಭಾಷಣದಲ್ಲಿ ದೇಶದ 15 ಕೋಟಿ ಅಲ್ಪಸಂಖ್ಯಾತ, ಮುಸ್ಲಿಂ ಸಮುದಾಯ ಒಗ್ಗಟ್ಟಿನಿಂದ ನಿಂತರೆ 100 ಕೋಟಿ ಹಿಂದೂ ಸಮುದಾಯವನ್ನು ಮಟ್ಟಹಾಕಬಹುದು ಎಂದೂ ವಿವಾದಾತ್ಮಕ ಹೇಳಿಕೆ ನೀಡಿ ದೊಡ್ಡ ಆಶಾಂತಿಗೆ ಕಾರಣವಾಗಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 