ಅಗ್ನಿ ಅವಘಡ: ದಂಪತಿ ಹಾಗೂ ಪುತ್ರಿ ಜೀವಂತ ಸಾವು
ಶ್ರೀನಗರ, ಮಾ 07, ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ದಂಪತಿ ಹಾಗೂ ಅವರ ಪುತ್ರಿಯೊಬ್ಬರು ಜೀವಂತ ಬೆಂದು ಹೋಗಿರುವ ಹೃದಯವಿದ್ರಾವಕ ಘಟನೆ ಶನಿವಾರ ಮುಂಜಾನೆ ನಡೆದಿದೆ. ಶೇಷಗಿರಿ ಮೊಹಲ್ಲಾದ ಮನೆತಲ್ಲಿಲ್ಲಿ ದುರಂತ ಸಂಭವಿಸಿದೆ. ಅಗ್ನಿ ಇಡೀ ಮನೆಯನ್ನು ವ್ಯಾಪಿಸಿದ್ದು, ಜಾವೆದ್ ಅಹ್ಮದ್, ಪತ್ನಿ ಸೋಫಿಯಾ ಜಾವೆದ್ ಹಾಗೂ ಪುತ್ರಿ ಹಫ್ಸಾ ಹೊರಬರಲು ಸಾಧ್ಯವಾಗದೆ ಬೆಂದು ಹೋಗಿದ್ದಾರೆ. ಬೆಂಕಿಯಲ್ಲಿ ತಂದೆ, ತಾಯಿ, ಮಗಳು ಮೂವರೂ ಸುಟ್ಟುಹೋಗಿದ್ದಾರೆ. ಅವಘಡಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 