ವಿಶ್ವದರ್ಜೆಯ ಸಂಶೋಧನೆಗೆ ಸಾಂಪ್ರದಾಯಕ ಜ್ಞಾನ, ಆಧುನಿಕ ವಿಜ್ಞಾನದ ಬಳಕೆ ಅಗತ್ಯ; ಮೋದಿ
ನವದೆಹಲಿ, ಫೆ 15 : ವಿಜ್ಞಾನಿಗಳು ವಿಶ್ವದರ್ಜೆಯ ಉತ್ಪನ್ನಗಳನ್ನು ತಯಾರಿಸಲು ಸಾಂಪ್ರದಾಯಿಕ ಜ್ಞಾನ ಮತ್ತು ಆಧುನಿಕ ವಿಜ್ಞಾನವನ್ನು ಸಮನಾಗಿ ಬಳಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶನಿವಾರ ದೆಹಲಿಯಲ್ಲಿ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು (ಸಿಎಸ್ ಐಆರ್ ) ಸಭೆಯ ಅಧ್ಯಕ್ಷತೆ ವಹಿಸಿದ ಮೋದಿ, ವಿಜ್ಞಾನಿಗಳು 5 ಜಿ, ಕೃತಕ ಬುದ್ಧಿಮತ್ತೆಯಂತಹ ಸವಾಲುಗಳು ಮತ್ತು ನವೀಕರಿಸಬಹುದಾದ ಇಂಧನಕ್ಕೆ ಅಗತ್ಯವಿರುವ ಸುಸ್ಥಿರ ಹಾಗೂ ಕಡಿಮೆ ದರದ ಬ್ಯಾಟರಿಗಳ ಮೇಲೆ ಹೆಚ್ಚಿನ ಗಮನಹರಿಸಬೇಕು ಎಂದು ಕರೆ ನೀಡಿದರು.
ದೇಶದ ಸಾಮಾನ್ಯ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಭವಿಷ್ಯದ ರೂಪುರೇಷೆ ತಯಾರಿಸಬೇಕು. ವಿಜ್ಞಾನಿಗಳು ಭಾರತದ ಅಗತ್ಯಗಳು ಮತ್ತು ಅಪೌಷ್ಠಿಕತೆ, ನೀರು ಸಂರಕ್ಷಣೆಯಂತಹ ಸಾಮಾಜಿಕ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕು ಎಂದು ಮೋದಿ ಸಲಹೆ ನೀಡಿದರು.
ವಿಜ್ಞಾನ ಕ್ಷೇತ್ರದತ್ತ ಹೆಚ್ಚಿನ ಯುವಜನತೆಯನ್ನು ಆಕರ್ಷಿಸುವ ಅಗತ್ಯವಿದೆ ಎಂದ ಮೋದಿ, ದೇಶದ ವಿವಿಧೆಡೆ ನೆಲೆಸಿರುವ ಭಾರತಿಯರೊಂದಿಗೆ ಕೈಜೋಡಿಸಿ ಸಂಶೋಧನೆ ಮತ್ತು ಅಭಿವೃದ್ಧಿ ಕೆಲಸಗಳನ್ನು ಹೊಸ ದಿಕ್ಕಿನೆಡೆ ಕೊಂಡೊಯ್ಯಬೇಕು ಎಂದು ಮೋದಿ ಕರೆ ನೀಡಿದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 