ಆನಂದ್ ಸಿಂಗ್ ಗೆ ಅರಣ್ಯ ಖಾತೆ ನೀಡಿದ್ದು ಕುರಿ ಕಾಯಲು ತೋಳ ನೇಮಿಸಿದಂತೆ: ಸಿದ್ದರಾಮಯ್ಯ
ಬೆಂಗಳೂರು, ಫೆ.14, ಸಚಿವ ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ಕೊಟ್ಟಿರುವುದು "ಸಂಬಳವಿಲ್ಲದೇ ಕುರಿ ಕಾಯಲು ತೋಳವನ್ನು ನೇಮಿಸಿದಂತಾಗಿದೆ ಎಂದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.ಆನಂದ್ ಸಿಂಗ್ಗೆ ನಿಜಕ್ಕೂ ನೈತಿಕತೆ ಇರುವುದೇ ಆದಲ್ಲಿ ಅರಣ್ಯ ಇಲಾಖೆ ಖಾತೆಗೆ ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದು ಅರಣ್ಯ ಕಾಯಿದೆಯಡಿ ದೂರು ದಾಖಲಾಗಿರುವ ಆನಂದ್ ಸಿಂಗ್ ಅಂತವರಿಗೆ ಅರಣ್ಯ ಇಲಾಖೆಯ ಖಾತೆ ನೀಡಿದ್ದಾರೆ. ಪ್ರಕರಣ ಎದರಿಸುತ್ತಿರುವವರನ್ನೇ ಸಚಿವರನ್ನಾಗಿ ನೇಮಿಸಿರುವುದು ಬಿಜೆಪಿ ಭ್ರಷ್ಟಾಚಾರ ಪೋಷಕ ಸರ್ಕಾರವೆನ್ನುವುದಕ್ಕೆ ಸಾಕ್ಷಿ ಎಂದು ಕುಟುಕಿದರು.ಯಡಿಯೂರಪ್ಪ ತಕ್ಷಣವೇ ಅರಣ್ಯ ಖಾತೆ ಹಿಂಪಡೆಯಬೇಕು ಇಲ್ಲವೇ ಆನಂದ್ ಸಿಂಗ್ ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 