ಕಬ್ಬಿನ ಬಾಕಿ ಬಿಲ್ ಪಾವತಿಗೆ ಕಾರ್ಖಾನೆಗಳ ಒಪ್ಪಿಗೆ: ಧರಣಿ ಹಿಂದಕ್ಕೆ
Factories agree to pay sugarcane dues: Protest called off
ಲೋಕದರ್ಶನ ವರದಿ
ಜಮಖಂಡಿ 02: ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಧರಣಿ ಸತ್ಯಾಗ್ರಹವನ್ನು ಹಿಂದಕ್ಕೆ ಪಡೆಯಲಾಗಿದೆ.. ಏ,10 ರ ವರೆಗೆ ಎಲ್ಲ ಸಕ್ಕರೆ ಕಾರ್ಖಾನೆಗಳು ಬಿಲ್ಲ ಪಾವತಿಸಲು ಒಪ್ಪಿಗೆ ನೀಡಿದ್ದು ಧರಣಿ ಹಿಂದಕ್ಕೆ ಪಡೆಯಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ತಾಲುಡಾಳಿತ ಸೌಧದ ಮುಂದೆ ಡಿವೈಎಸ್ಪಿ ಸೈಯದ್ ರೋಷನ್ ಜಮೀರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಸಿಪಿಐ ಮಲ್ಲಪ್ಪ ಮಡ್ಡಿ, ತಹಸೀಲ್ದಾರ ಅನೀಲ ಬಡಿಗೇರ ಹಾಗೂ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆದು ಧರಣಿ ಸತ್ಯಾಗ್ರಹವನ್ನು ಹಿಂದಕ್ಕೆ ಪಡೆಯಲು ತೀರ್ಮಾನಿಸಲಾಗಿದೆ ಎಂದರು.
ತಾಲೂಕಿನ 2 ಸಕ್ಕರೆ ಕಾರ್ಖಾನೆಗಳು ಸುಮಾರು 400 ಕೋಟಿ ರೂಪಾಯಿ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ. ಇದರಿಂದ ರೈತರು ಅನಿವಾರ್ಯವಾಗಿ ಹೋರಾಟಕ್ಕೆ ಮುಂದಾಗ ಬೇಕಾಗಿತ್ತು. ಇವತ್ತು ನಡೆದ ಸಭೆಯಲ್ಲಿ 10ನೇ ತಾರೀಖೀನ ಒಳಗಾಗಿ ರೈತರ ಬಾಕಿ ಹಣವನ್ನು ಬಿಡುಗಡೆ ಗೊಳಿಸಲು ಕಾರ್ಖಾನೆಗಳು ಒಪ್ಪಿಗೆ ಸೂಚಿಸಿರುವದರಿಂದ ಧರಣಿ ಹಿಂದಕ್ಕೆ ಪಡೆಯಲಾಗಿದೆ. ಕಾರ್ಖಾನೆಗಳ ಮಾಲಿಕರು ಕೊಟ್ಟ ಮಾತಿಗೆ ತಪ್ಪಿದ್ದಲ್ಲಿ ಎ, 10 ರಿಂದ ಪುನಹ ಧರಣಿ ಪ್ರಾರಂಭಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮುತ್ತಪ್ಪ ಕೋಮರ, ಶ್ರೀಶೈಲ ಬುಮಾರ,ರಾಜು ನದಾಫ, ಪ್ರಸನ್ನ ಜಮಖಂಡಿ, ಬಾಹುಬಲಿ ನ್ಯಾಮಗೌಡ, ಸಿದ್ದಪ್ಪ ಬಣಜಿಗ ,ಕಲ್ಲಪ್ಪ ಬಿರಾದಾರ, ಪ್ರಶಾಂತ ಖರೆ, ಮಹದೇವ ಉಪ್ಪಾಲದಿನ್ನಿ, ಕುಮಾರ ಬೀಳುರ, ಮಲ್ಲಿಕಾರ್ಜುನ ಬೆಕ್ಕೇರಿ ಸೇರಿದಂತೆ ಅನೇಕ ರೈತರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 