ಜಾತ್ರೆಗಳಿಂದ ಬಾಂಧವ್ಯ, ಸಂಸ್ಕಾರ ಹೆಚ್ಚಳ : ಬಾಬಾಸಾಹೇಬ ಪಾಟೀಲ
Fairs increase bonding and culture: Babasaheb Patil
ನೇಸರಗಿ 21: ದೇಶದಲ್ಲಿ ನಡೆಯುವ ಜಾತ್ರೆ, ಆದ್ಯಾತ್ಮಿಕ ಪ್ರವಚನ, ಅನ್ನ ದಾಸೋಹ ಪರಸ್ಪರ ಮನುಷ್ಯ ಮನುಷ್ಯರು ಬೆರೆತು ಹಬ್ಬ ಜಾತ್ರೆಗಳನ್ನು ಆಚರಿಸಿ, ಸ್ನೇಹಿತರು, ಸಂಬಂದಿಕರು, ಹೊರ ದೂರದ ಊರುಗಳಲ್ಲಿ ವಾಸಿಸುವ ಗ್ರಾಮದ ಜನರು ಇಂತಹ ಜಾತ್ರೆಗಳಲ್ಲಿ ಪಾಲ್ಗೊಂಡು ಬಾಂದವ್ಯ, ಸಂಸ್ಕಾರ ಹೆಚ್ಚಿಸುವ ಸತ್ಕಾರ್ಯ ಆಗುತ್ತದೆ ಎಂದು ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಅವರು ಶುಕ್ರವಾರದಂದು ಗ್ರಾಮದ ಚನ್ನವೃಷಬೇಂದ್ರ ದೇವರಕೊಂಡ ಅಜ್ಜನವರ ಜಾತ್ರಾ ಮಹೋತ್ಸವದ ನಿಮಿತ್ಯ ಇಂದು ನಡೆದ ರಥೋತ್ಸವದಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದು, ದೇವಸ್ಥಾನದ ಆವರಣದಲ್ಲಿ ನೂತನ ಕೋಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ ಚನ್ನವೃಷಬೇಂದ್ರ ಅಜ್ಜನವರ ದೇವಸ್ಥಾನಕ್ಕೆ ಈಗಾಗಲೇ ಅನುಧಾನ ನೀಡಿದ್ದು ಮುಂದಿನ ದಿನಗಳಲ್ಲಿ ಮಠದ ಅಭಿವೃದ್ಧಿಗೆ ಸದಾ ಸಹಕರಿಸುತ್ತೇನೆ ಎಂದರು.
ಸಾನಿಧ್ಯ ವಹಿಸಿ ನೇಸರಗಿ ಮಲ್ಲಾಪೂರ ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು ಮಾತನಾಡಿ ಚನ್ನವೃಷಬೇಂದ್ರ ಅಜ್ಜನವರ ಮಠವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು ಇದಕ್ಕೆ ಸದ್ಭಕ್ತರ ಭಕ್ತಿಯ ಸೇವೆ, ರಾಜಕೀಯ ಮುಖಂಡರ ಸಹಕಾರ ಎಂದರು. ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಗಳ ಮುಖಂಡರು, ಎಲ್ಲ ಸಮಾಜದ ಮುಖಂಡರು, ನೇಸರಗಿ ಗ್ರಾಮಸ್ಥರು, ಸಕಲ ಸದ್ಭಕ್ತರು ಭಾಗವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 