ಜಾತ್ರೆಗಳಿಂದ ಪ್ರೀತಿ, ವಿಶ್ವಾಸ ಹೆಚ್ಚಳ : ಸಂಸದ ಕಾಗೇರಿ
Fairs increase love and trust: MP Kageri
ನೇಸರಗಿ 04: ನಗರ ಪಟ್ಟಣ, ಗ್ರಾಮಗಳಲ್ಲಿ ನಡೆಯುವ ಜಾತ್ರೆಗಳಿಂದ ಅದರಲ್ಲಿ ಗ್ರಾಮದೇವತೆಯ ಜಾತ್ರೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಜಾತ್ರೆಗಳಿಂದ ಜನರಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಾಗುತ್ತದೆ ಎಂದು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ಶನಿವಾರದಂದು ಸಮೀಪದ ಮದನಬಾವಿ ಗ್ರಾಮದಲ್ಲಿ 11 ವರ್ಷಗಳ ನಂತರ ನಡೆಯುತ್ತಿರುವ ಶ್ರೀ ಗ್ರಾಮದೇವತೆಯ ಅದ್ದೂರಿ ಜಾತ್ರೆಗೆ ಬೇಟಿ ನೀಡಿ, ದೇವಿಯ ದರ್ಶನ ಪಡೆದು ಮಾತನಾಡಿ ಶ್ರೀ ಗ್ರಾಮದೇವತೆಯೂ ಗ್ರಾಮದ ಎಲ್ಲರಿಗೂ ಸುಖ ಸಂತೋಷ, ಮಳೆ, ಬೆಳೆ, ನೀಡಿ ಜನ ಸದಾ ಸುಖದಿಂದ ಜೀವನ ಮಾಡಲಿ ಎಂದರು.
ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಮಾತನಾಡಿ 11 ವರ್ಷಗಳ ನಂತರ ಗ್ರಾಮದೇವತೆ ಜಾತ್ರೆ ನಡೆಯುತ್ತಿರುವದು ನಮಗೆಲ್ಲರಿಗೂ ಸಂತಸ ತಂದಿದ್ದು, ದೂರದ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲರೂ ಇಂದು ಗ್ರಾಮಕ್ಕೆ ಬಂದು ತನು ಮನ ಧನದಿಂದ ಜಾತ್ರೆ ಅಚರಿಸುತ್ತಿದ್ದು ಸಂತಸದ ವಿಷಯ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಶಿವಪ್ಪ ಗುಜನಾಳ, ಯಲ್ಲನಗೌಡ ದೊಡ್ಡಗೌಡರ, ಅಜ್ಜಪ್ಪ ಹಮ್ಮಿನಿ, ನಿಂಗನಗೌಡ ದೊಡ್ಡಗೌಡರ, ಈರನಗೌಡ ದೊಡ್ಡಗೌಡರ, ಚನಗೌಡ ಹಾದಿಮನಿ, ಬಸವರಾಜ ಬದ್ರಿ, ಸೋಮಪ್ಪ ಕೊಳದೂರ, ಶಂಕರಗೌಡ ಕೊಳದೂರ , ಜಾತ್ರಾ ಕಮಿತಿ ಸದಸ್ಯರು, ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 