ನಕಲಿ ಕರೆನ್ಸಿ: ದಾವಣಗೆರೆ ಜಿಲ್ಲೆಯಲ್ಲಿ 11 ಮಂದಿ ಬಂಧನ, 3.62 ಲಕ್ಷ ರೂ. ಮೌಲ್ಯದ ನೋಟು ವಶ
ದಾವಣಗೆರೆ, ಫೆ 3 : ನಕಲಿ ನೋಟುಗಳನ್ನು ಮುದ್ರಿಸಿ, ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ನೋಟು ಮುದ್ರಿಸುತ್ತಿದ್ದ ಸ್ಥಳದಿಂದ 3.62 ಲಕ್ಷ ರೂ. ಮೊತ್ತದ 100,200,500 ಹಾಗೂ 2000 ರೂ ಮುಖಬೆಲೆಯ ನಕಲಿ ನೋಟುಗಳು, ಎರಡು ಪ್ರಿಂಟರ್ ಗಳು ಮತ್ತು ಕಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಹನುಮಪ್ಪ, ಹಲ್ಲೇಶ್, ಮಂಜಪ್ಪ, ಸಂತೋಷ್, ಚಂದ್ರಪ್ಪ, ಉದಯ, ಸಂತೋಷ್, ಕೃಷ್ಣಪ್ಪ, ನಿಂಗಪ್ಪ, ವೆಂಕಟೇಶ್ ಮತ್ತು ಪುಟ್ಟಪ್ಪ ಎಂದು ಗುರುತಿಸಲಾಗಿದೆ ಎಂಬುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.
ಈ ಸಂಬಂಧ ಚೆಗಟಗೆರೆ ಮತ್ತು ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಬಂಧಿತರು ಹಳ್ಳಿಯ ಜಾತ್ರೆಗಳ ವೇಳೆ ನಕಲಿ ನೋಟು ಚಲಾವಣೆ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 