ನಟ ಯುವರಾಜ್ ಕುಮಾರ್ ನೋಡಲು ಮುಗಿಬಿದ್ದ ಅಭಿಮಾನಿಗಳು
Fans are overwhelmed to see actor Yuvaraj Kumar
ಕೊಪ್ಪಳ 27: ನಟ ಯುವ ರಾಜಕುಮಾರ್ ನಟನೆಯ ಎಕ್ಕ ಚಲನಚಿತ್ರ ಶ್ರೀಲಕ್ಷ್ಮಿ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರವಿವಾರದಂದು ಅಭಿಮಾನಿಗಳನ್ನು ಭೇಟಿಯಾಗಲು ಬಂದ ರಾಘವೇಂದ್ರ ರಾಜಕುಮಾರ್ ಪುತ್ರ ನಟ ಯುವರಾಜಕುಮಾರನನ್ನು ನೋಡಿ ಸಾವಿರಾರು ಅಭಿಮಾನಿಗಳು ಅವರ ಮೇಲೆ ಹೂ ಹಾಕಿ ಸಂಭ್ರಮಿಸಿ,ಕುಣಿದರು.
ಚಿತ್ರಮಂದಿರದಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಚಿತ್ರಮಂದಿರದ ಮಾಲೀಕರಾದ ವೀರೇಶ್ ಮಹಾಂತಯ್ಯನಮಠ, ವಿಶ್ವನಾಥ್ ಮಹಾಂತಯ್ಯನಮಠ ವ್ಯವಸ್ಥೆಮಾಡಿದ್ದರು. ಆದರೆ ಚಿತ್ರಮಂದಿರ ಒಳಗೆ ಬರಲು ಆಗದಷ್ಟು ಅಭಿಮಾನಿಗಳು ಶ್ರೀ ಲಕ್ಷ್ಮಿ ಚಿತ್ರಮಂದಿರದ ಆವರಣದಲ್ಲಿ ಸೇರಿದ್ದು ಪೊಲೀಸ್ ಸಿಬ್ಬಂದಿಗಳು ಭದ್ರತೆ ವ್ಯವಸ್ಥೆ ಕೈಗೊಂಡಿದ್ದರು ಆದರೆ ನಾಯಕ ನಟ ಯುವರಾಜ್ ಕುಮಾರ್ ಕಾರಿನಿಂದ ಕೆಳಗೆ ಇಳಿಯಬೇಕೆಂದರೆ ಅಭಿಮಾನಿಗಳು ಸಾಕಷ್ಟು ಕೆಕೆ ಶಿಳ್ಳೆ ಜೈಕಾರ ಹಾಕುತ್ತಿದ್ದು ಕಂಡು ಕಾರಿನ ಮೇಲೆ ಕೇಕ್ ಕತ್ತರಿಸಿ ಅಭಿಮಾನಿಗಳತ್ತ ಕೈಬಿಸಿ ಕೈ ಕುಲುಕಿ ಗಂಗಾವತಿಗೆ ತೆರಳಿದರು.
ಈ ಸಂದರ್ಭದಲ್ಲಿ ಚಿತ್ರಮಂದಿರದ ವ್ಯವಸ್ಥಾಪಕರಾದ ಶಿವಾನಂದಯ್ಯ ಉತ್ತಂಗಿಮಠ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 