ಹೆಸ್ಕಾಂ ಕಚೇರಿ ಅಧಿಕಾರಿಗಳ ಬೀಳ್ಕೋಡುಗೆ ಗೌರವ ಸನ್ಮಾನ
Farewell ceremony for HESCOM office officials
ಹೆಸ್ಕಾಂ ಕಚೇರಿ ಅಧಿಕಾರಿಗಳ ಬೀಳ್ಕೋಡುಗೆ ಗೌರವ ಸನ್ಮಾನ
ಶಿಗ್ಗಾವಿ 07 : ಹೆಸ್ಕಾಂ ಕಚೇರಿಯ ತಾಂತ್ರಿಕ ಸಹಾಯಕ ಅಧಿಕಾರಿ ವಿನುತಾ ಎಸ್ ಹಾಗೂ ವಿಭಾಗಿಯ ಕಚೇರಿ ಶಿಗ್ಗಾವಿ ಉಪ ವಿಭಾಗದ ತಾಂತ್ರಿಕ ಸಹಾಯಕ ಅಧಿಕಾರಿ ಶಫಿ ಮುಲ್ಲಾ ಅವರನ್ನು ಆತ್ಮೀಯವಾಗಿ ಬಿಳ್ಕೋಡಲಾಯಿತು. ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಪೂರ್ವ ನಿಯೋಜಿತ ರಾಜ್ಯ ಸಂಘದ ಸದಸ್ಯ ಮಂಜುನಾಥ್ ಮಣ್ಣಣ್ಣವರ ಮಾತನಾಡಿ ಸರ್ಕಾರಿ ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ ಒಂದು ಪ್ರಕ್ರಿಯೆ ಅವರ ಸೇವೆ ಸ್ಮರಣೀಯವಾಗಿರಬೇಕು ವ್ಯವಹಾರಿಕವಾಗಿರುವ ಇಂದಿನ ವ್ಯವಸ್ಥೆಯಲ್ಲಿ ಕಾರ್ಯಗಳ ಸೇವೆ ಯಾವುದೇ ಫಲ ಅಪೇಕ್ಷೆ ಇಟ್ಟುಕೊಳ್ಳದೆ ತಮ್ಮ ಕರ್ತವ್ಯ ಹಾಗೂ ಕಾರ್ಯವನ್ನು ನಿರ್ವಹಿಸುವ ಅಧಿಕಾರಿ ವರ್ಗ ಬಹಳ ವಿರಳ ಆದರೆ ವಿನಿತಾ ಎಸ್ ಮತ್ತು ಸಫಿ ಮುಲ್ಲಾ ಅವರು ಇಲಾಖೆ ಹಾಗೂ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಡುವೆ ಅನನ್ಯ ಸಂಬಂಧ ಇಟ್ಟುಕೊಂಡು ಕಪ್ಪು ಚುಕ್ಕೆ ಇಲ್ಲದೆ ಯಾವುದೇ ಫಲಾಪೇಕ್ಷ ಬಯಸದೆ ತಮ್ಮ ಕರ್ತವ್ಯವನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿ ವರ್ಗಾವಣೆ ಹೊಂದಿರುವುದು ನಿಜಕ್ಕೂ ಬೇಜಾರು ತಂದಿದೆ ಎಂದರು.
ಈ ಸಂದರ್ಭದಲ್ಲಿ ನಾಗಯ್ಯ ಹಿರೇಮಠ, ಮುದುಕಪ್ಪ ವನಹಳ್ಳಿ, ಸುರೇಶ್ ಬಿಸನಹಳ್ಳಿ, ಅಬ್ದುಲ್ ಹರಪನಹಳ್ಳಿ, ಕೆ.ಟಿ. ಪಾಟೀಲ, ನವೀನ ಇಂಗಳಗಿ, ಈರಣ್ಣ ಎಲಿಗಾರ, ನವೀನ ಸಾಸನೂರ, ಚಂದ್ರು ಕೋಪರ್ಡೇ, ಹೆಸ್ಕಾಂ ಅಧಿಕಾರಿ ಹಾಗೂ ನೌಕರ ವರ್ಗ ಜೊತೆಗೆ ಗುತ್ತಿಗೆದಾರರು ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 