ಹೆಸ್ಕಾಂ ಕಚೇರಿ ಅಧಿಕಾರಿಗಳ ಬೀಳ್ಕೋಡುಗೆ ಗೌರವ ಸನ್ಮಾನ
Farewell ceremony for HESCOM office officials
ಹೆಸ್ಕಾಂ ಕಚೇರಿ ಅಧಿಕಾರಿಗಳ ಬೀಳ್ಕೋಡುಗೆ ಗೌರವ ಸನ್ಮಾನ
ಶಿಗ್ಗಾವಿ 07 : ಹೆಸ್ಕಾಂ ಕಚೇರಿಯ ತಾಂತ್ರಿಕ ಸಹಾಯಕ ಅಧಿಕಾರಿ ವಿನುತಾ ಎಸ್ ಹಾಗೂ ವಿಭಾಗಿಯ ಕಚೇರಿ ಶಿಗ್ಗಾವಿ ಉಪ ವಿಭಾಗದ ತಾಂತ್ರಿಕ ಸಹಾಯಕ ಅಧಿಕಾರಿ ಶಫಿ ಮುಲ್ಲಾ ಅವರನ್ನು ಆತ್ಮೀಯವಾಗಿ ಬಿಳ್ಕೋಡಲಾಯಿತು. ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಪೂರ್ವ ನಿಯೋಜಿತ ರಾಜ್ಯ ಸಂಘದ ಸದಸ್ಯ ಮಂಜುನಾಥ್ ಮಣ್ಣಣ್ಣವರ ಮಾತನಾಡಿ ಸರ್ಕಾರಿ ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ ಒಂದು ಪ್ರಕ್ರಿಯೆ ಅವರ ಸೇವೆ ಸ್ಮರಣೀಯವಾಗಿರಬೇಕು ವ್ಯವಹಾರಿಕವಾಗಿರುವ ಇಂದಿನ ವ್ಯವಸ್ಥೆಯಲ್ಲಿ ಕಾರ್ಯಗಳ ಸೇವೆ ಯಾವುದೇ ಫಲ ಅಪೇಕ್ಷೆ ಇಟ್ಟುಕೊಳ್ಳದೆ ತಮ್ಮ ಕರ್ತವ್ಯ ಹಾಗೂ ಕಾರ್ಯವನ್ನು ನಿರ್ವಹಿಸುವ ಅಧಿಕಾರಿ ವರ್ಗ ಬಹಳ ವಿರಳ ಆದರೆ ವಿನಿತಾ ಎಸ್ ಮತ್ತು ಸಫಿ ಮುಲ್ಲಾ ಅವರು ಇಲಾಖೆ ಹಾಗೂ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಡುವೆ ಅನನ್ಯ ಸಂಬಂಧ ಇಟ್ಟುಕೊಂಡು ಕಪ್ಪು ಚುಕ್ಕೆ ಇಲ್ಲದೆ ಯಾವುದೇ ಫಲಾಪೇಕ್ಷ ಬಯಸದೆ ತಮ್ಮ ಕರ್ತವ್ಯವನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿ ವರ್ಗಾವಣೆ ಹೊಂದಿರುವುದು ನಿಜಕ್ಕೂ ಬೇಜಾರು ತಂದಿದೆ ಎಂದರು.
ಈ ಸಂದರ್ಭದಲ್ಲಿ ನಾಗಯ್ಯ ಹಿರೇಮಠ, ಮುದುಕಪ್ಪ ವನಹಳ್ಳಿ, ಸುರೇಶ್ ಬಿಸನಹಳ್ಳಿ, ಅಬ್ದುಲ್ ಹರಪನಹಳ್ಳಿ, ಕೆ.ಟಿ. ಪಾಟೀಲ, ನವೀನ ಇಂಗಳಗಿ, ಈರಣ್ಣ ಎಲಿಗಾರ, ನವೀನ ಸಾಸನೂರ, ಚಂದ್ರು ಕೋಪರ್ಡೇ, ಹೆಸ್ಕಾಂ ಅಧಿಕಾರಿ ಹಾಗೂ ನೌಕರ ವರ್ಗ ಜೊತೆಗೆ ಗುತ್ತಿಗೆದಾರರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 