ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭ
Farewell ceremony for SSLC students
ಕಾರವಾರ 15: “ಶಾಲೆ ಎಂದರೆ ವಿದ್ಯಾ ದೇಗುಲ, ಪವಿತ್ರ ಸ್ಥಳ, ಉತ್ತಮ ಸಂಸ್ಕಾರ ಸಂಸ್ಕೃತಿಯ ಕೇಂದ್ರವಾಗಿದೆ. ನೀವು ಇಲ್ಲಿ ವಿದ್ಯೆಯ ಜೊತಗೆ ಶಿಸ್ತು, ಸಂಯಮ, ಸ್ವಚ್ಛತೆ, ಆತ್ಮವಿಶ್ವಾಸ ಹಾಗೂ ಎಲ್ಲರೊಂದಿಗೆ ಪ್ರೀತಿ ವಿಶ್ವಾಸ, ಶ್ರದ್ದಾ ಭಕ್ತಿಯಿಂದ ಇರುವುದನ್ನು ಕಲಿತ್ತಿದ್ದೀರಿ. ಇದು ನಿಮ್ಮ ಮುಂದಿನ ಜೀವನಕ್ಕೆ ನಾಂದಿಯಾಗಲಿದೆ” ಎಂದು ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಶ್ರೀ ಜಿ.ಪಿ. ಕಾಮತ ನುಡಿದರು. ಅವರು ಬಾಲಮಂದಿರ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಮಾತನಾಡಿ, “ನಾಲ್ಕು ವರ್ಷದ ಮಗುವಾಗಿದ್ದಾಗಿನಿಂದ ನಮ್ಮೊಂದಿಗಿದ್ದ ನೀವುಗಳು ಈಗ ಬೆಳೆದು ಪ್ರಬುದ್ಧರಾಗಿದ್ದೀರಿ. ಕೇವಲ ದೈಹಿಕವಾಗಿ ಮಾತ್ರವಲ್ಲ, ನಮ್ಮ ಶಿಕ್ಷಕರು ನಿಮ್ಮನ್ನು ಬೌದ್ಧಿಕವಾಗಿಯೂ ಬೆಳೆಸಿದ್ದಾರೆ” ಎಂದು ನುಡಿದರು.
ವಿದ್ಯಾರ್ಥಿಗಳಾದ ಕು. ಧನ್ಯಶ್ರೀ ಕುರ್ಸೆ, ಕು. ಆದಿತ್ಯ ಎ. ನಾಯ್ಕ, ಕು. ಸಾತ್ವಿಕ್ ಎಚ್.ಎಸ್., ಕು. ಯೆಸುಫ್ ಶೇಖ್, ಕು. ಅರನವ ಕದಂ, ಕು. ಪವನ ಗಾಲಿ, ಕು. ಶುಹೇಲ್ ಪ್ರಜಾಪತಿ, ಕು. ಯಾನ್ ಗೊವೇಕರ ಹಾಗೂ ಷಣ್ಮಖ ಗೌಡ ತಮ್ಮ ವಿದ್ಯಾರ್ಥಿ ಜೀವನದ ಅನುಭವ ಹಂಚಿಕೊಂಡರು.
ದೀಪ ಬೆಳಗುವುದರ ಮೂಲಕ ಈ ಕಾರ್ಯಕ್ರಮವನ್ನು ಆರಂಭಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಶಕ್ಷಕಿ ದೀಪಾ ಪಿ. ನಾಯ್ಕ ತಮ್ಮ ಅನುಭವ ಹಂಚಿಕೊಂಡರು. ಶಿಕ್ಷಕಿ ಸೀಮಾ ರೇವಣಕರ ಕಾರ್ಯಕ್ರಮ ನಿರೂಪಿಸಿದರು. ನಾಹಿದಾ ಹನಗಿ ಮಕ್ಕಳಿಂದ ಪ್ರಮಾಣವಚನ ಬೋಧಿಸಿದರು ಹಾಗೂ ರಾಜಶ್ರೀ ಹರಿಕಂತ್ರ ವಂದನೆ ಸಲ್ಲಿಸಿದರು. ಈ ಸಮಾರಂಭದಲ್ಲಿ ಎಲ್ಲಾ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 