ಕೃಷಿ ಸಾಲ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ರೈತ ಸಾವು
Farm loan: Farmer commits suicide
ರಾಣಿಬೆನ್ನೂರು 25: ವಿಷ ಸೇವಿಸಿದ್ದ ರೈತರೊಬ್ಬರು ಚಿಕಿತ್ಸೆ ಫಲಿಸದೇ ಸಾವೀಗೀಡಾದ ಘಟನೆ ಬುಧವಾರ ತಾಲೂಕಿನ ಮಾಗೋಡ ಗ್ರಾಮದಲ್ಲಿ ನಡೆದಿದೆ.ಕರಬಸಪ್ಪ ಉಜ್ಜಪ್ಪ ಕಮದೋಡ(31) ಮೃತ ರೈತ. ಇವರು ತಮ್ಮ ತಂದೆಯ ಹೆಸರಿನಲ್ಲಿ ಗ್ರಾಮದ ವಿವಿಧೆಡೆ ಸುಮಾರು 12 ಎಕರೆ ಜಮೀನುಗಳಲ್ಲಿ ಕೃಷಿ ಕೈಗೊಂಡಿದ್ದರು. ಕೃಷಿಗಾಗಿ ರಾಣಿಬೆನ್ನೂರಿನ ಎಸ್ಬಿಐನಲ್ಲಿ 3 ಲಕ್ಷ ಸಾಲ ಮಾಡಿದ್ದರು.
ಆದರೆ ಇತ್ತೀಚಿನ ವರ್ಷಗಳಲ್ಲಿ ಪ್ರಕೃತಿ ವಿಕೋಪದಿಂದ ಕೃಷಿಯಲ್ಲಿ ಹಾನಿ ಸಂಭವಿಸುತ್ತಾ ಬಂದ ಕಾರಣ ಆ. 15ರಂದು ಮನನೊಂದು ರೇಷ್ಮೆ ಮನೆಯಲ್ಲಿ ವಿಷ ಸೇವಿಸಿದ್ದರು. ಅವರನ್ನು ತಕ್ಷಣವೇ ರಾಣಿಬೆನ್ನೂರಿನ ಸರ್ಕಾರಿ ಆಸ್ಪತ್ರೆ, ದಾವಣಗೆರೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವೀಗೀಡಾಗಿದ್ದಾರೆ ಎಂದು ಮೃತರ ಪತ್ನಿ ಕವಿತಾ ಹಲಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 