ಕೃಷಿ ಸಾಲ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ರೈತ ಸಾವು
Farm loan: Farmer commits suicide
ರಾಣಿಬೆನ್ನೂರು 25: ವಿಷ ಸೇವಿಸಿದ್ದ ರೈತರೊಬ್ಬರು ಚಿಕಿತ್ಸೆ ಫಲಿಸದೇ ಸಾವೀಗೀಡಾದ ಘಟನೆ ಬುಧವಾರ ತಾಲೂಕಿನ ಮಾಗೋಡ ಗ್ರಾಮದಲ್ಲಿ ನಡೆದಿದೆ.ಕರಬಸಪ್ಪ ಉಜ್ಜಪ್ಪ ಕಮದೋಡ(31) ಮೃತ ರೈತ. ಇವರು ತಮ್ಮ ತಂದೆಯ ಹೆಸರಿನಲ್ಲಿ ಗ್ರಾಮದ ವಿವಿಧೆಡೆ ಸುಮಾರು 12 ಎಕರೆ ಜಮೀನುಗಳಲ್ಲಿ ಕೃಷಿ ಕೈಗೊಂಡಿದ್ದರು. ಕೃಷಿಗಾಗಿ ರಾಣಿಬೆನ್ನೂರಿನ ಎಸ್ಬಿಐನಲ್ಲಿ 3 ಲಕ್ಷ ಸಾಲ ಮಾಡಿದ್ದರು.
ಆದರೆ ಇತ್ತೀಚಿನ ವರ್ಷಗಳಲ್ಲಿ ಪ್ರಕೃತಿ ವಿಕೋಪದಿಂದ ಕೃಷಿಯಲ್ಲಿ ಹಾನಿ ಸಂಭವಿಸುತ್ತಾ ಬಂದ ಕಾರಣ ಆ. 15ರಂದು ಮನನೊಂದು ರೇಷ್ಮೆ ಮನೆಯಲ್ಲಿ ವಿಷ ಸೇವಿಸಿದ್ದರು. ಅವರನ್ನು ತಕ್ಷಣವೇ ರಾಣಿಬೆನ್ನೂರಿನ ಸರ್ಕಾರಿ ಆಸ್ಪತ್ರೆ, ದಾವಣಗೆರೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವೀಗೀಡಾಗಿದ್ದಾರೆ ಎಂದು ಮೃತರ ಪತ್ನಿ ಕವಿತಾ ಹಲಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 