ಕೃಷಿ ಸಾಲ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ರೈತ ಸಾವು
Farm loan: Farmer commits suicide
ರಾಣಿಬೆನ್ನೂರು 25: ವಿಷ ಸೇವಿಸಿದ್ದ ರೈತರೊಬ್ಬರು ಚಿಕಿತ್ಸೆ ಫಲಿಸದೇ ಸಾವೀಗೀಡಾದ ಘಟನೆ ಬುಧವಾರ ತಾಲೂಕಿನ ಮಾಗೋಡ ಗ್ರಾಮದಲ್ಲಿ ನಡೆದಿದೆ.ಕರಬಸಪ್ಪ ಉಜ್ಜಪ್ಪ ಕಮದೋಡ(31) ಮೃತ ರೈತ. ಇವರು ತಮ್ಮ ತಂದೆಯ ಹೆಸರಿನಲ್ಲಿ ಗ್ರಾಮದ ವಿವಿಧೆಡೆ ಸುಮಾರು 12 ಎಕರೆ ಜಮೀನುಗಳಲ್ಲಿ ಕೃಷಿ ಕೈಗೊಂಡಿದ್ದರು. ಕೃಷಿಗಾಗಿ ರಾಣಿಬೆನ್ನೂರಿನ ಎಸ್ಬಿಐನಲ್ಲಿ 3 ಲಕ್ಷ ಸಾಲ ಮಾಡಿದ್ದರು.
ಆದರೆ ಇತ್ತೀಚಿನ ವರ್ಷಗಳಲ್ಲಿ ಪ್ರಕೃತಿ ವಿಕೋಪದಿಂದ ಕೃಷಿಯಲ್ಲಿ ಹಾನಿ ಸಂಭವಿಸುತ್ತಾ ಬಂದ ಕಾರಣ ಆ. 15ರಂದು ಮನನೊಂದು ರೇಷ್ಮೆ ಮನೆಯಲ್ಲಿ ವಿಷ ಸೇವಿಸಿದ್ದರು. ಅವರನ್ನು ತಕ್ಷಣವೇ ರಾಣಿಬೆನ್ನೂರಿನ ಸರ್ಕಾರಿ ಆಸ್ಪತ್ರೆ, ದಾವಣಗೆರೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವೀಗೀಡಾಗಿದ್ದಾರೆ ಎಂದು ಮೃತರ ಪತ್ನಿ ಕವಿತಾ ಹಲಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 