ರೈತರ ಸುಗ್ಗಿಹಬ್ಬ ಸಂಕ್ರಾಂತಿ ಭಾರತೀಯ ಸಂಸ್ಕೃತಿಯ ಪರಂಪರೆ: ಡಾ.ಪ್ರವೀಣ
ಲೋಕದರ್ಶನವರದಿ
ರಾಣೇಬೆನ್ನೂರು14: ರೈತರ ಸುಗ್ಗಿ ಹಬ್ಬವೆಂದೇ ಬಿಂಬಿತವಾಗಿರುವ ಸಂಕ್ರಾಂತಿ ಆಚರಣೆಯ ಪ್ರಯುಕ್ತ ಸ್ಥಳೀಯ ಖನ್ನೂರ ವಿದ್ಯಾನಿಕೇತನ ಶಾಲಾ ಆವರಣದಲ್ಲಿ ಮಕ್ಕಳೊಂದಿಗೆ ಶಾಲಾ ಆಡಳಿತ ಮಂಡಳಿಯವರು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ ಸಂಕ್ರಾಂತಿಯ ಮಾಹಿತಿಯನ್ನು ಅನಾವರಣಗೊಳಿಸಿದರು.
ಸಂಸ್ಥೆಯ ಕಾರ್ಯದರ್ಶಿ ಡಾ. ಪ್ರವೀಣ ಎಂ ಖನ್ನೂರ ಹಾಗೂ ಖಜಾಂಚಿ ಡಾ. ಶೈಲಶ್ರೀ ಪಿ ಖನ್ನೂರ ಇವರುಗಳು ಧಾನ್ಯದ ರಾಶಿಗಳಿಗೆ ಪೂಜೆ ಹಾಗೂ ಗೋವುಗಳಿಗೆ ಪೂಜೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಭಕ್ತಿ ಪೂರ್ವಕವಾಗಿ ಚಾಲನೆ ನೀಡಿ ಇಂತಹ ಸುಗ್ಗಿ ಹಬ್ಬವು ರೈತರಿಗೆ ಚೈತನ್ಯ ನೀಡಲಿ, ರೈತರ ಬಾಳು ಹಸನಾಗಲಿ ಎಂದು ಆಶಿಸಿದರು.
ಪ್ರಾಂಶುಪಾಲ ಡಾ.ಮಹಾಂತೇಶ ಆರ್ ಕಮ್ಮಾರ, ಮುಖ್ಯೋಪಾದ್ಯಾಯಿನಿ ಲೀಲಾವತಿ, ತುಷಾರ ಕೊಟ್ಟುರು, ಕು.ಶ್ವೇತಾ ಮೇಲಿನಮನಿ ಕು. ಮಾನ್ಯಾ ಅಡಿವೆಪ್ಪನವರ, ಕು. ಚಂದನಾ ತಹಶೀಲ್ದಾರ, ಕು. ರಚನಾ ಬಿ ಪಾಟೀಲ, ಸಚಿತ್ ಜಿ ಕುಂದಾಪುರ ಮತ್ತಿತರರು ಭಾಗವಹಿಸಿದ್ದರು. ಅನೇಕ ವಿದ್ಯಾರ್ಥಿಗಳು ಸಂಕ್ರಾಂತಿ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾಥರ್ಿಗಳು ನಡೆಸಿದ ಸುಗ್ಗಿ ನೃತ್ಯ ಜನಮನ ಸೆಳೆಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 