ರೈತ ಸುರಕ್ಷಾ ಫಸಲ್ ಬಿಮಾ ಯೋಜನೆ ಜಾರಿಗೆ

ರೈತ ಸುರಕ್ಷಾ ಫಸಲ್ ಬಿಮಾ ಯೋಜನೆ ಜಾರಿಗೆ Farmer's Safety Crop Insurance Scheme implemented

ಹಾವೇರಿ 12 : ರಾಜ್ಯದಲ್ಲಿ 2025-26 ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ಜಿಲ್ಲೆಯ ಎಲ್ಲಾ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಮಂಜೂರಾತಿ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.  

ಹಾವೇರಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26 ನೇ ಸಾಲಿನಲ್ಲಿ 14 ಬೆಳೆಗಳಾದ ಜೋಳ (ನೀರಾವರಿ), ಜೋಳ (ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ), ಗೋಧಿ (ಮಳೆ ಆಶ್ರಿತ), ಕಡಲೆ (ಮಳೆ ಆಶ್ರಿತ), ಕಡಲೆ (ನೀರಾವರಿ), ಉದ್ದು (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ), ಹೆಸರು (ಮಳೆ ಆಶ್ರಿತ), ಸೂರ್ಯಕಾಂತಿ (ಮಳೆ ಆಶ್ರಿತ), ಸೂರ್ಯಕಾಂತಿ (ನೀರಾವರಿ), ಕುಸುಬೆ (ಮಳೆ ಆಶ್ರಿತ), ಈರುಳ್ಳಿ (ನೀರಾವರಿ) ಮತ್ತು ಟೊಮ್ಯಾಟೊ-ಓಖ ಇವುಗಳನ್ನು ಹಿಂಗಾರು ಹಂಗಾಮಿಗೆ ಮತ್ತು 3 ಬೆಳೆಗಳಾದ  ಭತ್ತ (ನೀರಾವರಿ), ನೆಲಗಡಲೆ (ಶೇಂಗಾ) (ನೀರಾವರಿ) ಮತ್ತು ಸೂರ್ಯಕಾಂತಿ (ನೀರಾವರಿ) ಇವುಗಳನ್ನು ಬೇಸಿಗೆ ಹಂಗಾಮಿಗೆ ಅಧಿಸೂಚಿಸಲು ಹಾಗೂ ಇವುಗಳಲ್ಲಿ ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ (ಗ್ರಾಮ ಪಂಚಾಯತಿ ವ್ಯಾಪ್ತಿಯಿಂದ ಹೊರಗಿರುವ ಮತ್ತು ಪಟ್ಟಣ/ನಗರ ವ್ಯಾಪ್ತಿಗೆ ಸೇರುವ ಗ್ರಾಮಗಳನ್ನು ಸೇರಿಸಿದಂತೆ) ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಳವಡಿಸಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ಬ್ಯಾಂಕುಗಳು, ಸಾಮಾನ್ಯ ಸೇವಾ ಕೇಂದ್ರ (ಅಠಟಠ ಖಜಡಿತಛಿಜ ಅಜಟಿಣಜಢಿ), ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.