ಕಬ್ಬಿನ ಗದ್ದೆಗೆ ತಗುಲಿದ್ದ ಬೆಂಕಿಯನ್ನು ನಂದಿಸಲು ಹೋಗಿ ರೈತ ಸಜೀವ ದಹನ
Farmer burnt alive while trying to put out fire in sugarcane field
ಕೊಲ್ಹಾರ 01: ಕಬ್ಬಿನ ಗದ್ದೆಗೆ ತಗುಲಿದ್ದ ಬೆಂಕಿಯನ್ನು ನಂದಿಸಲು ಹೋಗಿದ್ದ ರೈತನೊಬ್ಬ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಪಟ್ಟಣದ ಸಮೀಪದ ಮಹಾದೇವಪ್ಪನ ತೆವೆರ ಬಳಿ ನಡೆದಿದೆ.
ಮೃತರನ್ನು ಸಂಗಪ್ಪ ಈರ್ಪ ಕುಂಬಾರ (80) ಎಂದು ಗುರುತಿಸಲಾಗಿದೆ. ತಮ್ಮ ಸ್ವಂತ ಜಮೀನಿನಲ್ಲಿದ್ದ ಗೋಧಿ ಹುಲ್ಲು ಸುಡಲು ಬೆಂಕಿ ಹಚ್ಚಿದ ವೇಳೆ, ಆ ಬೆಂಕಿ ಪಕ್ಕದ ಜಮೀನಿನ ಕಬ್ಬಿನ ಗದ್ದೆಗೆ ಹಬ್ಬಿದೆ. ಅದನ್ನು ನಂದಿಸಲು ತೆರಳಿದ ಸಂಗಪ್ಪ ಅವರು ಅಕಸ್ಮಿಕವಾಗಿ ಬೆಂಕಿಗೆ ಸಿಲುಕಿದ್ದು, ಮಧ್ಯಾಹ್ನ ಸಮಯದಲ್ಲಿ ಸಜೀವ ದಹನಗೊಂಡಿದ್ದಾರೆ.
ಘಟನೆ ನಡೆದ ವೇಳೆ ಸುತ್ತಮುತ್ತ ಯಾರೂ ಇರಲಿಲ್ಲ. ಸಂಜೆ ವೇಳೆಗೆ ಮನೆಗೆ ಮರಳದ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಕೊಲ್ಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 