ಕೆರೆಗಳನ್ನು ತುಂಬಿಸಲು ಆಗ್ರಹಿಸಿ ರೈತ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ
Farmer organizations appeal to the District Collector to fill the lakes
ಕೆರೆಗಳನ್ನು ತುಂಬಿಸಲು ಆಗ್ರಹಿಸಿ ರೈತ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ರಾಯಬಾಗ, 04 ; ತಾಲೂಕಿನ ಬಾವನಸೌಂದತ್ತಿ ಮತ್ತು ಚಿಂಚಲಿ ಜಾಕ್ವೆಲ್ದಿಂದ ತಾಲೂಕಿನ 58 ಕೆರೆಗಳನ್ನು ತುಂಬಿಸುವ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ಕೆರೆಗಳನ್ನು ತುಂಬಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಮತ್ತು ರೈತರು ಜಿಲ್ಲಾಧಿಕಾರಿ ಮೊಹಮ್ಮದ ರೋಷನ ಅವರಿಗೆ ಮನವಿ ಸಲ್ಲಿಸಿದರು.
ಗುರುವಾರ ಮಧ್ಯಾಹ್ನ ಪಟ್ಟಣದ ಝೇಂಡಾ ಕಟ್ಟೆ ಹತ್ತಿರ ರೈತರು ಹಸು, ಚಕ್ಕಡಿ ಗಾಡಿ ಮತ್ತು ಕುರಿಆಡುಗಳೊಂದಿಗೆ ಆಗಮಿಸಿ ರಸ್ತೆಯನ್ನು ಬಂದ ಮಾಡಿ ಉಗ್ರ ಪ್ರತಿಭಟನೆ ನಡೆಸಿದರು. ಸುಮಾರು 5 ಗಂಟೆಗಳ ಕಾಲ ಹಾರೂಗೇರಿ-ರಾಯಬಾಗ-ಚಿಕ್ಕೋಡಿ ರಸ್ತೆ ಬಂದ ಮಾಡಿದ್ದರಿಂದ ಪ್ರಯಾಣಿಕರು, ವಾಹನ ಸವಾರರು ಪರದಾಡುವಂತಾಯಿತು.
ಬಳಿಕ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ, ತಾಲೂಕಿನ ರಾಯಬಾಗ ಮತ್ತು ಕುಡಚಿ ಮತಕ್ಷೇತ್ರಗಳ 58 ಕೆರೆಗಳನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಿ 7 ವರ್ಷಗಳು ಕಳೆದರೂ, ಇನ್ನುವರೆಗೂ ಕಾಮಗಾರಿಯನ್ನು ಪೂರ್ಣಗೊಳಿಸದೇ ಸರ್ಕಾರ ಕಾಲಹರಣ ಮಾಡುತ್ತಿರುವುದರಿಂದ ಮಳೆ ಆಶ್ರಿತ ಪ್ರದೇಶಗಳಲ್ಲಿನ ಜನಜಾನುವರುಗಳಿಗೆ ಮತ್ತು ರೈತರ ಕೃಷಿ ಭೂಮಿಗೆ ತುಂಬ ತೊಂದರೆಯಾಗುತ್ತಿದೆ ಎಂದೂ ಆರೋಪಿಸಿದರು. ಕೆರೆ ತುಂಬು ಯೋಜನೆ ಶೀಘ್ರವಾಗಿ ಪೂರ್ಣಗೊಳಿಸಲು ಒತ್ತಾಯಿಸಿ ಈಗಾಗಲೇ ಎರಡು ಬಾರಿ ರೈತ ಸಂಘದಿಂದ ಧರಣಿ ಹೋರಾಟ ನಡೆಸಿದರೂ ಇನ್ನುವರೆಗೂ ಯೋಜನೆ ಪೂರ್ಣಗೊಳ್ಳದೇ ಇರುವುದು ಅತ್ಯಂತ ನಾಚಿಕೆಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆರೆ ತುಂಬು ಯೋಜನೆ ಪೂರ್ಣಗೊಳಿಸಿ, ಕೆರೆಗಳಿಗೆ ನೀರು ತುಂಬಿಸಿದರೆ ಅಂತರಜಲಮಟ್ಟ ಹೆಚ್ಚಾಗಿ ನೀರಿನ ತೊಂದರೆ ಬಗೆಹರಿಸಬಹುದು ಮತ್ತು ರೈತರಿಗೆ ಮತ್ತು ಜನಜಾನುವಾರುಗಳಿಗೆ ನೀರಿನ ಶಾಶ್ವತ ಪರಿಹಾರ ಆಗಲಿದೆ ಎಂದರು. 10 ದಿನಗಳಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಕೆರೆ ತುಂಬುವ ಯೋಜನೆ ಜಾಕ್ವೆಲ್ಗಳಿಗೆ ಭೇಡಿ ನೀಡಿ ಪರೀಶಿಲನೆ ನಡೆಸಿ, ಕೆರೆ ತುಂಬುವ ಯೋಜನೆ ಪ್ರಾರಂಭಿಸಲು ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರವಾಗಿ ಸೂಕ್ತವಾಗಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎಸ್.ಡಿ.ಮಲ್ಲಾಪೂರ, ರಮೇಶ ಕಲ್ಹಾರ, ಪರಸಪ್ಪ ಚಿನಗುಂಡಿ, ಮಲ್ಲಪ್ಪ ಅಂಗಡಿ, ನಿಂಗಪ್ಪ ಪಕಾಂಡಿ, ವಿಜಯ ನಾಯಿಕ, ನಿಂಗಪ್ಪ ಪಾತ್ರೋಟ, ಅಜೀತ ಜಾಧವ ಸೇರಿ ನೂರಾರು ರೈತರು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 