ಕೆರೆಗಳನ್ನು ತುಂಬಿಸಲು ಆಗ್ರಹಿಸಿ ರೈತ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ
Farmer organizations appeal to the District Collector to fill the lakes
ಕೆರೆಗಳನ್ನು ತುಂಬಿಸಲು ಆಗ್ರಹಿಸಿ ರೈತ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ರಾಯಬಾಗ, 04 ; ತಾಲೂಕಿನ ಬಾವನಸೌಂದತ್ತಿ ಮತ್ತು ಚಿಂಚಲಿ ಜಾಕ್ವೆಲ್ದಿಂದ ತಾಲೂಕಿನ 58 ಕೆರೆಗಳನ್ನು ತುಂಬಿಸುವ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ಕೆರೆಗಳನ್ನು ತುಂಬಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಮತ್ತು ರೈತರು ಜಿಲ್ಲಾಧಿಕಾರಿ ಮೊಹಮ್ಮದ ರೋಷನ ಅವರಿಗೆ ಮನವಿ ಸಲ್ಲಿಸಿದರು.
ಗುರುವಾರ ಮಧ್ಯಾಹ್ನ ಪಟ್ಟಣದ ಝೇಂಡಾ ಕಟ್ಟೆ ಹತ್ತಿರ ರೈತರು ಹಸು, ಚಕ್ಕಡಿ ಗಾಡಿ ಮತ್ತು ಕುರಿಆಡುಗಳೊಂದಿಗೆ ಆಗಮಿಸಿ ರಸ್ತೆಯನ್ನು ಬಂದ ಮಾಡಿ ಉಗ್ರ ಪ್ರತಿಭಟನೆ ನಡೆಸಿದರು. ಸುಮಾರು 5 ಗಂಟೆಗಳ ಕಾಲ ಹಾರೂಗೇರಿ-ರಾಯಬಾಗ-ಚಿಕ್ಕೋಡಿ ರಸ್ತೆ ಬಂದ ಮಾಡಿದ್ದರಿಂದ ಪ್ರಯಾಣಿಕರು, ವಾಹನ ಸವಾರರು ಪರದಾಡುವಂತಾಯಿತು.
ಬಳಿಕ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ, ತಾಲೂಕಿನ ರಾಯಬಾಗ ಮತ್ತು ಕುಡಚಿ ಮತಕ್ಷೇತ್ರಗಳ 58 ಕೆರೆಗಳನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಿ 7 ವರ್ಷಗಳು ಕಳೆದರೂ, ಇನ್ನುವರೆಗೂ ಕಾಮಗಾರಿಯನ್ನು ಪೂರ್ಣಗೊಳಿಸದೇ ಸರ್ಕಾರ ಕಾಲಹರಣ ಮಾಡುತ್ತಿರುವುದರಿಂದ ಮಳೆ ಆಶ್ರಿತ ಪ್ರದೇಶಗಳಲ್ಲಿನ ಜನಜಾನುವರುಗಳಿಗೆ ಮತ್ತು ರೈತರ ಕೃಷಿ ಭೂಮಿಗೆ ತುಂಬ ತೊಂದರೆಯಾಗುತ್ತಿದೆ ಎಂದೂ ಆರೋಪಿಸಿದರು. ಕೆರೆ ತುಂಬು ಯೋಜನೆ ಶೀಘ್ರವಾಗಿ ಪೂರ್ಣಗೊಳಿಸಲು ಒತ್ತಾಯಿಸಿ ಈಗಾಗಲೇ ಎರಡು ಬಾರಿ ರೈತ ಸಂಘದಿಂದ ಧರಣಿ ಹೋರಾಟ ನಡೆಸಿದರೂ ಇನ್ನುವರೆಗೂ ಯೋಜನೆ ಪೂರ್ಣಗೊಳ್ಳದೇ ಇರುವುದು ಅತ್ಯಂತ ನಾಚಿಕೆಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆರೆ ತುಂಬು ಯೋಜನೆ ಪೂರ್ಣಗೊಳಿಸಿ, ಕೆರೆಗಳಿಗೆ ನೀರು ತುಂಬಿಸಿದರೆ ಅಂತರಜಲಮಟ್ಟ ಹೆಚ್ಚಾಗಿ ನೀರಿನ ತೊಂದರೆ ಬಗೆಹರಿಸಬಹುದು ಮತ್ತು ರೈತರಿಗೆ ಮತ್ತು ಜನಜಾನುವಾರುಗಳಿಗೆ ನೀರಿನ ಶಾಶ್ವತ ಪರಿಹಾರ ಆಗಲಿದೆ ಎಂದರು. 10 ದಿನಗಳಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಕೆರೆ ತುಂಬುವ ಯೋಜನೆ ಜಾಕ್ವೆಲ್ಗಳಿಗೆ ಭೇಡಿ ನೀಡಿ ಪರೀಶಿಲನೆ ನಡೆಸಿ, ಕೆರೆ ತುಂಬುವ ಯೋಜನೆ ಪ್ರಾರಂಭಿಸಲು ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರವಾಗಿ ಸೂಕ್ತವಾಗಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎಸ್.ಡಿ.ಮಲ್ಲಾಪೂರ, ರಮೇಶ ಕಲ್ಹಾರ, ಪರಸಪ್ಪ ಚಿನಗುಂಡಿ, ಮಲ್ಲಪ್ಪ ಅಂಗಡಿ, ನಿಂಗಪ್ಪ ಪಕಾಂಡಿ, ವಿಜಯ ನಾಯಿಕ, ನಿಂಗಪ್ಪ ಪಾತ್ರೋಟ, ಅಜೀತ ಜಾಧವ ಸೇರಿ ನೂರಾರು ರೈತರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 