ಜಾನುವಾರು ಕಳ್ಳತನ ಪತ್ತೆಗೆ ಕ್ರಮ ಕೈಗೊಳ್ಳಲು ಒತ್ತಾಯ: ರೈತ ಸಂಘ
Farmers' association demands action to detect cattle theft
ಲೋಕದರ್ಶನ ವರದಿ
ಹೂವಿನಹಡಗಲಿ 12: ತಾಲೂಕಿನ ನಾನಾ ಕಡೆಗಳಲ್ಲಿ ಜಾನುವಾರು ಮತ್ತು ಎತ್ತುಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಕೂಡಲೇ ಪೊಲೀಸ್ ಇಲಾಖೆ ಪತ್ತೆಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.ತಾಲೂಕಿನ ಹೊಳಗುಂದಿ ಗ್ರಾಮದ ಕೆ.ಎಂ. ಶಿವಕುಮಾರ ಅವರಿಗೆ ಸೇರಿದ್ದ ಕಣದಲ್ಲಿ ಇದ್ದ 2 ಲಕ್ಷ ಮೌಲ್ಯದ 2 ಎತ್ತುಗಳು, ಬೀರಬ್ಬಿ ಗ್ರಾಮದ ದಿನಕರ ಹಾಗೂ ಪಟ್ಟಣದ ಹೊನ್ನೂರು ರಸ್ತೆಯಲ್ಲಿನ ಜಾನುವಾರು ಕಳ್ಳತನವಾಗಿದೆ. ಜೀವನೋಪಾಯಕ್ಕಾಗಿ ಎತ್ತುಗಳನ್ನು ರೈತರು ಸಾಕುತ್ತಿದ್ದರು. ಆದರೆ, ಕಳ್ಳರ ಕಾಟಕ್ಕೆ ರೈತರು ರೋಸಿ ಹೋಗಿದ್ದಾರೆ. ಆದ್ದರಿಂದ ರೈತರ ಜಾನುವಾರು ಮತ್ತು ಎತ್ತುಗಳನ್ನು ಪತ್ತೆ ಮಾಡಬೇಕೆ0ದು ಮನವಿ ಸಲ್ಲಿಸಿದ್ದಾರೆ. ಜಾನುವಾರು ಮತ್ತುಸಂಘದ ತಾಲೂಕು ಅಧ್ಯಕ್ಷ ಎಚ್. ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಶಿವರಾಜ ಹೊಳಗುಂದಿ, ಜಯಪ್ಪ, ಕೆ. ಮಂಜುನಾಥ, ಹುಲುಗಪ್ಪ, ಮೆಹಬೂಬ್ ಸಾಬ್, ಕೆ.ಎಂ. ಶಿವಕುಮಾರ, ಗೀರೀಶ ಸೇರಿದಂತೆ ಇತರರು ಸಿಪಿಐ ಮಲ್ಲಪ್ಪ ಹೂಗಾರ ಇವರಿಗೆ ಮನವಿ ಪತ್ರ ಸಲ್ಲಿಸಿದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 