ವಿದ್ಯುತ್ ಖಾಸಗಿಕರಣ ಖಂಡಿಸಿ ರೈತ ಸಂಘ ಬೃಹತ್ ಪ್ರತಿಭಟನೆ
Farmers' association holds massive protest against electricity privatization
ಘಟಪ್ರಭಾ 23 : ರಾಜ್ಯ ವಿದ್ಯುತ್ ಇಲಾಖೆಯಯನ್ನು ಖಾಸಗೀಕರಣಗೊಳಿಸುವ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಹಸಿರು ಸೇನೆ ರೈತ ಸಂಘಟನೆಯ ಗಣೇಶ ಇಳಿಗೇರ, ಮಹಾದೇವ ಗೋಡೆರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಘಟಪ್ರಭಾದ ಶ್ರೀ ಮೃತ್ಯುಂಜಯ ವೃತ್ತದಲ್ಲಿ ಸಂಕೇಶ್ವರ ನರಗುಂದ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಮಂಗಳವಾರದಂದು ನಡೆಯಿತು. ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ವಿ ಮಹಾಜನ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ, ಡಾ. ಕೆಂಪಣ್ಣಾ ಚೌಕಶಿ, ದಲಿತ ಸಂಘಟನೆಗಳ ಅರ್ಜುನ ಗಂಡವ್ವಗೋಳ ಮುಂತಾದವರು ಮಾತನಾಡಿದರು. ಈ ಸಂದರ್ಭದಲ್ಲಿ ಅಪ್ಪಾಸಾಬ ಮುಲ್ಲಾ , ಕೃಷ್ಣಾ ಗಂಡವ್ವಗೋಳ, ರಾಜಶೇಖರ ರಜಪೂತ ಸೇರಿದಂತೆ ರೈತ ಸಂಘಟನೆಗಳ, ಕನ್ನಡ ಪರ, ದಲಿತ ಪರ ಸಂಘಟನೆಗಳ ಸದಸ್ಯರು ನಾಗರೀಕರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ಸಿ ಪಿ ಆಯ ಶ್ರೀಶೈಲ, ಎಚ್ ಡಿ ಮುಲ್ಲಾ ನೇತೃತ್ವದಲ್ಲಿ ಪೋಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 