ಬೆಳೆ ವಿಮೆ ನೋಂದಣಿ ಗೊಂದಲ ನಿವಾರಣೆಗೆ ರೈತ ಸಂಘ ಆಗ್ರಹ
Farmers' association urges resolution of crop insurance registration confusion
ಬ್ಯಾಡಗಿ, ಜು.10: ಜಿಲ್ಲೆಯಲ್ಲಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ದ್ವಂದ್ವಗಳನ್ನು ನಿವಾರಿಸಿ ಸರಳವಾದ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ರೈತ ಸಂಘ ಆಗ್ರಹಿಸಿದೆ.
ತಾಲೂಕಿನ ಮೊಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಸಮೀಪ ಪ್ರತಿಭಟನೆ ನಡೆಸಿದ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಕೃಷಿ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಕಳೆದ ಕೆಲವು ವರ್ಷಗಳಿಂದ ಸಮರ್ಕ ಮಳೆಯ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದು, ಈ ವರ್ಷವೂ ಮಳೆ ಅಭಾವದಿಂದ ಬೆಳೆ ನಷ್ಟದ ಆತಂಕ ಎದುರಾಗಿದೆ ಎಂದು ಹೇಳಿದರು.
ಬೆಳೆ ವಿಮೆ ನೋಂದಣಿಯಲ್ಲಿ ಸಾಲಗಾರರು ಮತ್ತು ಸಾಲೇತರ ರೈತರ ವರ್ಗೀಕರಣ, ಸ್ವಯಂ ದೃಢೀಕರಣ ಸೇರಿದಂತೆ ಹಲವು ತಾಂತ್ರಿಕ ಸಮಸ್ಯೆಗಳು ರೈತರಲ್ಲಿ ಗೊಂದಲ ಉಂಟುಮಾಡಿವೆ. ಇದರಿಂದ ಅನೇಕ ರೈತರು ವಿಮೆ ವ್ಯಾಪ್ತಿಯಿಂದ ಹೊರಗುಳಿಯುವ ಸಾಧ್ಯತೆ ಇದ್ದು, ಸರ್ಕಾರ ಕೂಡಲೇ ಸಮಸ್ಯೆ ಪರಿಹರಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಕೃಷಿ ನಿರ್ದೇಶಕ ಡಾ. ಪುತ್ರ, ಕೃಷಿ ಆಯುಕ್ತ ಡಾ. ಸತೀಶ್ ಹಾಗೂ ರೈತ ಸಂಘದ ಪದಾಧಿಕಾರಿಗಳಾದ ಮರುಗೌಡ ಪಾಟೀಲ, ಶಿವಯೋಗಿ ಹೊಸಗೌಡ್ರ, ಗುಡ್ಡನಗೌಡ ಪಾಟೀಲಗೌಡ್ರ, ರುದ್ರ್ಪ ಅಣ್ಣಿ, ಸುಭಾಷ್ ಬನ್ನಿಹಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 