ಕಬ್ಬಿಗೆ ನಿಗದಿತ ದರ ಮಾಡಬೇಕೆಂದು ರೈತರ ಆಹೋರಾತ್ರಿ ಧರಣಿ ಸತ್ಯಾಗ್ರಹ
Farmers' day-night sit-in demanding fixed price for sugarcane
ಯರಗಟ್ಟಿ, 05 : ಪ್ರತಿ ಟನ್ ಕಬ್ಬಿಗೆ ?3500 ದರ ನಿಗದಿ ಮಾಡಬೇಕೆಂದು ಒತ್ತಾಯಿಸಿ, ನಾನಾ ರೈತ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕಬ್ಬು ಬೆಳೆಗಾರರು ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತಿದಲ್ಲಿ 4ನೇ ದಿನದ ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು.ಧರಣಿಯಲ್ಲಿ ರೈತರು ಭಜನೆ, ಡೊಳ್ಳು ನಾದ, ಪದಗೀತೆಗಳ ಮೂಲಕ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳದಲ್ಲೇ ಅಡುಗೆ ಮಾಡಿ ಊಟ ಮಾಡುವ ಮೂಲಕ ತಮ್ಮ ಹೋರಾಟವನ್ನು ಮುಂದುವರಿಸಿದರು. ಈ ವೇಳೆ ಅನೇಕ ಶ್ರೀಗಳು, ಮುಖಂಡರು ಅವರು ಅಕ್ಕಿ ಪಾಕೆಟುಗಳು ಸೇರಿದಂತೆ ನಾನಾ ಕಿರಾಣಿ ವಸ್ತುಗಳನ್ನು ದೇಣಿಗೆಯಾಗಿ ನೀಡಿದರು.ನೇಗಿಲ ಯೋಗಿ ರೈತ ಸಂಘದ ಹೋರಾಟಕ್ಕೆ ಬೇಕಾದ ಸಕಲ ವ್ಯವಸ್ಥೆ ಕಲ್ಪಿಸಿದರು.ಬಿಜೆಪಿ ಮುಖಂಡ ಮಡಿವಾಳಪ್ಪ ಬಿದರಗಡ್ಡಿ ಮಾತನಾಡಿ, “ಪ್ರತಿ ಟನ್ ಕಬ್ಬಿಗೆ ?3500 ದರ ನಿಗದಿ ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ರೈತರ ಹೋರಾಟಕ್ಕೆ ನಾನು ಸದಾ ಬೆಂಬಲಿಯಾಗಿರುತ್ತೇನೆ,” ಎಂದು ಹೇಳಿದರು.
ಸಕ್ಕರೆ ಕಾರ್ಖಾನೆಗಳು ನಷ್ಟದಲ್ಲಿದ್ದೇವೆ ಎಂದು ಹೇಳಿಕೊಳ್ಳುತ್ತಿವೆ. ಹಾಗಾದರೆ ಮತ್ತೆ ಹೊಸ ಕಾರ್ಖಾನೆಗಳನ್ನು ಏಕೆ ಆರಂಭಿಸುತ್ತಿದ್ದಾರೆ? ಇದು ರೈತರನ್ನು ದಿಕ್ಕುತಪ್ಪಿಸುವ ರಾಜಕೀಯ ಆಟ,” ಎಂದು ಆಕ್ರೋಶ ವ್ಯಕ್ತಪಡಿಸಿದರು ಮತ್ತು ರೈತರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಕರೆ ನೀಡಿದರು.ಕಾಂಗ್ರೆಸ್ ಮುಖಂಡ ಉಮೇಶ ಬಾಳಿ ಮಾತನಾಡಿ, “ಪ್ರತಿ ಟನ್ ಕಬ್ಬಿಗೆ ?3500 ದರ ಘೋಷಣೆ ಮಾಡುವವರೆಗೆ ಹೋರಾಟ ನಿಲ್ಲದು,” ಎಂದು ಹೇಳಿದರು.
ಜಿಲ್ಲೆಯಲ್ಲಿ 28 ಸಕ್ಕರೆ ಕಾರ್ಖಾನೆಗಳಿದ್ದರೂ ಯಾವುದೇ ಕಾರ್ಖಾನೆ ರೈತರ ಬೇಡಿಕೆಯಂತೆ ದರ ಘೋಷಣೆ ಮಾಡಿಲ್ಲವೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಈ ಧರಣಿಯಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು. ನೇಗಿಲ ಯೋಗಿ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ರೈತ ಮಹಾಸಂಘ, ಸ್ವಾಭಿಮಾನ ರೈತ ಸಂಘ, ಕರ್ನಾಟಕ ರಾಷ್ಟ್ರೀಯ ಪಕ್ಷ ಸೇರಿದಂತೆ ವಿವಿಧ ಸಂಘಟನೆಗಳು ಧರಣಿಗೆ ಬೆಂಬಲ ನೀಡಿದವು.
ಗಣ್ಯರಿಂದ ಬೆಂಬಲ:ಬಿಜೆಪಿ ಮಂಡಳ ಅಧ್ಯಕ್ಷ ವಿರೂಪಾಕ್ಷ ಮಾಮನಿ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಪಂಚನಗೌಡ ದ್ಯಾಮನಗೌಡರ, ಉದಯ ಕರ್ಜಗಿಮಠ, ರೈತ ಸಂಘದ ಮುಖಂಡರಾದ ಮಹಾಂತೇಶ ತೋಟಗಿ, ಯಲ್ಲನಾಯ್ಕ ನಾಯ್ಕರ, ಮಾರುತಿ ಹಾಲ್ಲೋಳ್ಳಿ, ಬಿ. ಜಿ. ಕುಂಬಾರ, ಬಸವರಾಜ ಬಿಜ್ಜೂರ, ಈರ್ಪ ಪಗಡಿ, ರಮೇಶ ಪಾಲಬಾಂವಿ, ಮಹಾದೇವ ಕಲಾರಕೋಪ್ಪ, ಸುರೇಶ ಬಂಟನೂರ, ಅಶೋಕ ನಂದಿ, ಗೌಡಪ್ಪ ಸವದತ್ತಿ, ಚಂದ್ರ್ಪ ಹೊಸಮನಿ, ಸಿದ್ದಪ್ಪ ಅಡಕಲಗುಂಡಿ, ಶಿವಕುಮಾರ ಗಾಣಗಿ, ಶಂಕರ ತಡಸಿ, ಸೋಮು ರೈನಾಪೂರ, ರಾಮಕೃಷ್ಣ ಎಳ್ಳಮ್ಮಿ, ರಂಗಪ್ಪ ಗಂಗರಡ್ಡಿ, ಮುತ್ತು ವೀರಾಪೂರ ಅನೇಕ ಗಣ್ಯರು ಹಾಗೂ ಜನಪ್ರತಿನಿಧಿಗಳು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 