ರೈತರ ಜಮೀನುಗಳಿಗೆ ಒಂದೇ ರೀತಿ ಬೆಲೆ ನಿಗದಿ ಮಾಡಿ ಪರಿಹಾರ ಒದಗಿಸಬೇಕು: ಶಂಕರಗೌಡ ಹಿರೇಗೌಡ
Farmers' lands should be priced uniformly and compensation should be provided: Shankaragowda Hiregow
ದೇವರಹಿಪ್ಪರಗಿ 03: ತಾಲ್ಲೂಕಿನ ಜಾಲವಾದ ಗ್ರಾಮದಲ್ಲಿ ಆರ್.ಎಫ್.ಝಡ್ ಕಂಪನಿ ಮಾಲೀಕರು ರೈತರ ಜಮೀನುಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಎಸಗಿದ್ದಾರೆ, ಎಲ್ಲಾ ರೈತರಿಗೆ ಒಂದೇ ದರ ನಿಗದಿ ಮಾಡಿ ಪರಿಹಾರ ಒದಗಿಸಬೇಕು ಅಲ್ಲಿಯವರೆಗೆ ಕೆಲಸ ಬಂದ್ ಮಾಡಲು ತಹಶೀಲ್ದಾರ ನಿಂಗಣ್ಣ ಬಿರಾದಾರ ಅವರಿಗೆ ಸೂಚನೆ ನೀಡಿದ್ದರು.ತಾಲ್ಲೂಕಿನ ಜಾಲವಾದ ಗ್ರಾಮದಲ್ಲಿ ಗುರುವಾರ 11ನೇ ದಿನದ ರೈತ ಸಂಘ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ರೈತರ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ಆರ್.ಎಫ್.ಝಡ್ ಕಂಪನಿ ಮಾಲೀಕರು ದಲ್ಲಾಳಿಗಳು ರೈತರಿಗೆ ನ್ಯಾಯಯುತ ಬೆಲೆ ನೀಡಲು ಒತ್ತಾಯ ಮಾಡಿದರು.
ಸುಮಾರು 20 ಜನ ರೈತರಿಂದ 69 ಎಕರೆ ಜಮೀನು ಖರೀದಿಸಿದ್ದು ಕೆಲ ರೈತರಿಗೆ ಎಕರೆಗೆ 28 ಲಕ್ಷ ನೀಡಿದ್ದಾರೆ, ಇನ್ನು ಕೆಲ ಜನರಿಗೆ 16 ಲಕ್ಷ ನೀಡಿದ್ದಾರೆ. ಎಲ್ಲಾ ಒಂದೇ ತರನಾದ ಜಮೀನುಗಳಿಗೆ ಈ ರೀತಿಯ ಬೆಲೆ ನಿಗದಿ ಮಾಡಿದ್ದು ರೈತರಿಗೆ ಅನ್ಯಾಯ ಎಸಗಿದ್ದಾರೆ. ಕೂಡಲೇ ಕಂಪನಿಯವರು ರೈತರ ಜಮೀನುಗಳಲ್ಲಿ ಕೆಲಸ ನಿರ್ವಹಿಸುತ್ತಿರುವುದನ್ನು ಬಂದ್ ಮಾಡಿ ರೈತರಿಗೆ ಒಂದೇ ರೀತಿಯಾಗಿ ಪರಿಹಾರ ಒದಗಿಸಬೇಕು ಅಲ್ಲಿಯವರೆಗೆ ಕಂಪನಿಯವರಿಗೆ ನೋಟಿಸ್ ನೀಡಿ ಎಂದು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.
ಸಂದರ್ಭದಲ್ಲಿ ಉತ್ತರ ಕರ್ನಾಟಕದ ರೈತ ಸಂಘದ ಅಧ್ಯಕ್ಷರಾದ ಶಂಕರಗೌಡ ಹಿರೇಗೌಡ ಅವರು ಮಾತನಾಡಿ ರೈತರ ಜಮೀನುಗಳಿಗೆ ಒಂದೇ ರೀತಿ ಬೆಲೆ ನಿಗದಿ ಮಾಡಿ ಪರಿಹಾರ ಒದಗಿಸಬೇಕು. ಜಮೀನು ಕಳೆದುಕೊಂಡ ರೈತರ ಕುಟುಂಬದ ಒಬ್ಬರಿಗೆ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಭೀಮರಾಯ ಮನಗೂಳಿ, ಚಾಂದ ಇನಾಮದಾರ, ಮಡು ದಳವಾಯಿ, ಶಿವರಾಜ ನೀರಲಗಿ, ಪ್ರಧಾನಿ ನೀರಲಗಿ, ಈರ್ಪ ನಡುಗೇರಿ, ಸಲೀಂ ಮುಲ್ಲಾ, ಅಲ್ಲಾಬಾಕ್ಷ ಇನಾಮದಾರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 