ದೇವರಹಿಪ್ಪರ್ಗಿ ಸೊಲಾರ್ ಪಾರ್ಕ್ ಯೋಜನೆ ವಿರುದ್ಧ ರೈತರ ಆಕ್ರೋಶ
Farmers' outrage against Devarhippargi Solar Park project
ಲೋಕದರ್ಶನ ವರದಿ
ವಿಜಯಪುರ 29: ಜಿಲ್ಲೆಯ ದೇವರಹಿಪ್ಪರ್ಗಿ ತಾಲೂಕಿನ ಕೊರವಾರ ಗ್ರಾಮದಲ್ಲಿ ಸನ್ಸೂರ್ ಸೊಲಾರ್ ಪಾರ್ಕ್ ಪ್ರೈವೇಟ್ ಲಿಮಿಟೆಡ್ (ವಿಂಡ್ಪ್ಯಾನ್) ಕಂಪನಿಯು ರೈತರಿಂದ ಭೂಮಿ ಪಡೆದು ಸೊಲಾರ್ ಯೋಜನೆ ನಡೆಸುತ್ತಿದೆ ಎಂದು ಆರೋಪ ಕೇಳಿಬಂದಿದೆ. ಸುಮಾರು 10 ಎಕರೆ ಭೂಮಿಯನ್ನು ಯೋಜನೆಗೆ ತೆಗೆದುಕೊಳ್ಳಲಾಗಿದ್ದು, 1 ಎಕರೆ ಖರೀದಿ ಮತ್ತು 6ಹಿ7 ಎಕರೆ 29 ವರ್ಷ 11 ತಿಂಗಳು ಬಾಡಿಗೆಗೆ ನೀಡಲಾಗಿದೆ ಎಂಬ ಮಾಹಿತಿ ಇದೆ.
ಆದರೆ ಬಾಡಿಗೆ, ಎನ್ಎ (ಭೂ ಪರಿವರ್ತನೆ), ಪವರ್ ಆಫ್ ಅಟಾರ್ನಿ ಹಾಗೂ ದಾಖಲೆಗಳ ಸಹಿ ವಿಚಾರದಲ್ಲಿ ಅನ್ಯಾಯ ನಡೆದಿದೆ ಎಂದು ರೈತರು ಆರೋಪಿಸುತ್ತಿದ್ದಾರೆ. ಸರ್ಕಾರಿ ಅನುಮತಿ ಇಲ್ಲದೆ ಯೋಜನೆ ಮುಂದುವರಿಸಲಾಗುತ್ತಿದೆ ಹಾಗೂ ಕೃಷಿಭೂಮಿಯನ್ನು ಅನ್ಯಾಯವಾಗಿ ಬಳಸಲಾಗುತ್ತಿದೆ ಎಂಬುದು ಪ್ರಮುಖ ಆರೋಪವಾಗಿದೆ. ರೈತ ಸಂಘ ಮತ್ತು ಹಸಿರು ಸೇನೆಯ ಪ್ರತಿನಿಧಿಗಳು ಈ ವಿಷಯದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅನ್ಯಾಯ ಮುಂದುವರಿದರೆ ನ್ಯಾಯಾಲಯದಲ್ಲಿ ದಾವೆ ಹಾಕಿ ಯೋಜನೆ ಆರಂಭ ತಡೆಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 