ಯೂರಿಯಾ ಗೊಬ್ಬರ ಕೊರತೆ ರೈತ ರ ಪರದಾಟ
Farmers' protest over urea fertilizer shortage
ಹೂವಿನಹಡಗಲಿ 23 : ಪಟ್ಟಣದಲ್ಲಿ ಕೃಷಿಗೆ ಅಗತ್ಯವಾದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ಸಮರ್ಕವಾಗಿ ಗೊಬ್ಬರ ಸಿಗದೆ ರೈತರು ಪರದಾಡುವಂತಾಗಿದೆ.ಪಟ್ಟಣದ ಶಾಸ್ತ್ರೀಯ ವೃತ್ತದಲ್ಲಿ ರುವ ರೈತ ಸೇವಾ ಸಹಕಾರ ಸಂಘ ಹಾಗೂ ತಾಲೂಕು ಕಚೇರಿ ಬಳಿ ತಾಲ್ಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಮಂಗಳವಾರ. ಬುಧವಾರ ಯೂರಿಯಾ ಗೊಬ್ಬರ ಬಂದಿದ್ದು.
ಪಟ್ಟಣದ ಸುತ್ತಮುತ್ತಲಿನ ರೈತ ರು ಸರದಿ ಸಾಲಿನಲ್ಲಿ ನಿಂತು ತಲಾ ಎರಡು ಚೀಲದಂತೆ ಗೊಬ್ಬರವನ್ನು ತೆಗೆದುಕೊಂಡು ಹೋಗುತ್ತಿದ್ದರು ಕೆಲವರಿಗೆ ಗೊಬ್ಬರ ಸಿಗದೇ ನಿರಾಸೆಯಾದರು. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆ ಆಗಿದ್ದು, ಇದರಿಂದ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಅದರಲ್ಲೂ ಕಡಿಮೆ ದರ ಎನ್ನುವ ಕಾರಣಕ್ಕೆ ಯೂರಿಯಾ ಗೊಬ್ಬರಕ್ಕೆ ವ್ಯಾಪಕ ಬೇಡಿಕೆ ಬಂದಿದೆ. ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ , ಗೋವಿನ ಜೋಳ ಬೆಳೆಯಲಾಗುತ್ತದೆ. ಅಗತ್ಯ ಪ್ರಮಾಣದಲ್ಲಿ ಯೂರಿಯಾ ನೀಡಿದರೆ ಈ ಬೆಳೆಗಳು ಚೇತರಿಸಿಕೊಂಡು ಬೆಳವಣಿಗೆ ಉತ್ತಮಗೊಳ್ಳುತ್ತದೆ ಎಂಬ ಉದ್ದೇಶದಿಂದ ಯೂರಿಯಾ ಖರೀದಿಸಲು ರೈತರು ಮುಂದಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 