ಶಾಲಾ ಕಟ್ಟಡ ನಿಮರ್ಾಣ ತೆರವುಗೊಳಿಸುವಂತೆ ರೈತರ ಮನವಿ
ರಾಣೇಬೆನ್ನೂರು21: ತಾಲೂಕಿನ ಹೂಲಿಹಳ್ಳಿ ಗ್ರಾಮದ ಹತ್ತಿರ ಅನಧಿಕೃತವಾಗಿ ನಿಮರ್ಿಸಿರುವ ಶಾಲಾ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ, ತಾಲೂಕಾ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ ಕೆ.ಎಸ್.ವಡ್ಡನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ತಾಲೂಕಿನ ಅಸುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹೂಲಿಹಳ್ಳಿ ಗ್ರಾಮದ ಜಾಗೆಯಲ್ಲಿ ಅನಧಿಕೃತವಾಗಿ ಮದರಸಾ ಶಾಲಾ ಕಟ್ಟಡವನ್ನು ನಿಮರ್ಾಣ ಮಾಡಲಾಗುತ್ತಿದೆ.
ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದರೂ ಇದುವರೆಗೂ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ದೂರಿದರು.
ಜೂ.4ರ ಒಳಗಾಗಿ ಸೂಕ್ತ ಕ್ರಮ ಜರುಗಿಸದೇ ಇದ್ದಲ್ಲಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ, ಅಲ್ಲದೆ ತಹಸೀಲ್ದಾರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಶಿವಶಂಕರ ಬಾಕರ್ಿ, ನ್ಯಾಯವಾದಿ ಮೃತ್ಯುಂಜಯ ಗುದಿಗೇರ, ಸುರೇಶ ಗುತ್ತಲ, ಆನಂದ ಹುಲ್ಬನಿ, ರೇವಪ್ಪ ಲಮಾಣಿ, ಪರಮೇಶಪ್ಪ ಅರಳಿಕಟ್ಟಿ, ಕಿರಣ ಗುಳೇದ, ಕರಿಯಪ್ಪ ಮೈಲಾರ, ಶಂಕರಪ್ಪ ಕುರುಬರ ಸೇರಿದಂತೆ ಮತ್ತಿತರು ಇದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 