ಶಾಲಾ ಕಟ್ಟಡ ನಿಮರ್ಾಣ ತೆರವುಗೊಳಿಸುವಂತೆ ರೈತರ ಮನವಿ
ರಾಣೇಬೆನ್ನೂರು21: ತಾಲೂಕಿನ ಹೂಲಿಹಳ್ಳಿ ಗ್ರಾಮದ ಹತ್ತಿರ ಅನಧಿಕೃತವಾಗಿ ನಿಮರ್ಿಸಿರುವ ಶಾಲಾ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ, ತಾಲೂಕಾ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ ಕೆ.ಎಸ್.ವಡ್ಡನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ತಾಲೂಕಿನ ಅಸುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹೂಲಿಹಳ್ಳಿ ಗ್ರಾಮದ ಜಾಗೆಯಲ್ಲಿ ಅನಧಿಕೃತವಾಗಿ ಮದರಸಾ ಶಾಲಾ ಕಟ್ಟಡವನ್ನು ನಿಮರ್ಾಣ ಮಾಡಲಾಗುತ್ತಿದೆ.
ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದರೂ ಇದುವರೆಗೂ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ದೂರಿದರು.
ಜೂ.4ರ ಒಳಗಾಗಿ ಸೂಕ್ತ ಕ್ರಮ ಜರುಗಿಸದೇ ಇದ್ದಲ್ಲಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ, ಅಲ್ಲದೆ ತಹಸೀಲ್ದಾರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಶಿವಶಂಕರ ಬಾಕರ್ಿ, ನ್ಯಾಯವಾದಿ ಮೃತ್ಯುಂಜಯ ಗುದಿಗೇರ, ಸುರೇಶ ಗುತ್ತಲ, ಆನಂದ ಹುಲ್ಬನಿ, ರೇವಪ್ಪ ಲಮಾಣಿ, ಪರಮೇಶಪ್ಪ ಅರಳಿಕಟ್ಟಿ, ಕಿರಣ ಗುಳೇದ, ಕರಿಯಪ್ಪ ಮೈಲಾರ, ಶಂಕರಪ್ಪ ಕುರುಬರ ಸೇರಿದಂತೆ ಮತ್ತಿತರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 