ರೈತರ ಸ್ಥಿತಿಗತಿ ಅವಲೋಕನ: ಏ.6 ರಿಂದ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ
ಬೆಂಗಳೂರು,
ಏ 5,ಕೋವಿಡ್-19 ಲಾಕ್ಡೌನ್ ನಿಂದ ರೈತರಿಗಾಗಲೀ ರೈತರ ಪರಿಕರ
ಮಾರುಕಟ್ಟೆಗಾಗಲೀ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೂ ತರಕಾರಿ
ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ. ಈ
ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ
ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು
ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಏ .6 ರಿಂದ 11 ರವರೆಗೆ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾಮಟ್ಟದ ಸಭೆಗಳು ನಡೆಯಲಿವೆ.ಸಚಿವರು
ಏ.6 ರ ಸೋಮವಾರದಂದು ಧಾರವಾಡ, ಬೆಳಗಾವಿ, ಬಾಗಲಕೋಟೆ 7ರಂದು ಬಿಜಾಪುರ, ಕಲಬುರಗಿ,
ಬೀದರ್ ಏ.8ರಂದು ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ 9ರಂದು ಗದಗ್,
ಹಾವೇರಿ ಏ.10ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ 11 ರಂದು ಮೈಸೂರು, ಚಾಮರಾಜನಗರ,
ಮಂಡ್ಯ, ರಾಮನಗರ ಈ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.ಜಿಲ್ಲೆಯ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಪೊಲೀಸ್, ಕೃಷಿ,
ತೋಟಗಾರಿಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಲ್ಲಾಇಲಾಖೆಗಳ ಜೊತೆ
ಸಭೆ ನಡೆಸಲಿದ್ದಾರೆ.ಸಭೆಯಲ್ಲಿ ರೈತರು, ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ,ಬೀಜ
ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ
ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 