ರೈತರ ಸ್ಥಿತಿಗತಿ ಅವಲೋಕನ: ಏ.6 ರಿಂದ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ
ಬೆಂಗಳೂರು,
ಏ 5,ಕೋವಿಡ್-19 ಲಾಕ್ಡೌನ್ ನಿಂದ ರೈತರಿಗಾಗಲೀ ರೈತರ ಪರಿಕರ
ಮಾರುಕಟ್ಟೆಗಾಗಲೀ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೂ ತರಕಾರಿ
ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ. ಈ
ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ
ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು
ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಏ .6 ರಿಂದ 11 ರವರೆಗೆ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾಮಟ್ಟದ ಸಭೆಗಳು ನಡೆಯಲಿವೆ.ಸಚಿವರು
ಏ.6 ರ ಸೋಮವಾರದಂದು ಧಾರವಾಡ, ಬೆಳಗಾವಿ, ಬಾಗಲಕೋಟೆ 7ರಂದು ಬಿಜಾಪುರ, ಕಲಬುರಗಿ,
ಬೀದರ್ ಏ.8ರಂದು ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ 9ರಂದು ಗದಗ್,
ಹಾವೇರಿ ಏ.10ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ 11 ರಂದು ಮೈಸೂರು, ಚಾಮರಾಜನಗರ,
ಮಂಡ್ಯ, ರಾಮನಗರ ಈ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.ಜಿಲ್ಲೆಯ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಪೊಲೀಸ್, ಕೃಷಿ,
ತೋಟಗಾರಿಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಲ್ಲಾಇಲಾಖೆಗಳ ಜೊತೆ
ಸಭೆ ನಡೆಸಲಿದ್ದಾರೆ.ಸಭೆಯಲ್ಲಿ ರೈತರು, ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ,ಬೀಜ
ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ
ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 