ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ರೈತರ ಮನವಿ
ಶಿಗ್ಗಾವಿ05: ತಾಲೂಕಿನ ನೀರಲಗಿ, ಕಡಳ್ಳಿ, ತಿಮ್ಮಾಪೂರ ಸೇರಿದಂತೆ ವಿವಿಧ ಗ್ರಾಮಗಳ ನೀರಾವರಿ ಕೃಷಿ ಅವಲಂಬಿತ ರೈತರಿಗೆ ವಿದ್ಯುತ್ ಸರಬರಾಜಿನಲ್ಲಿ ತುಂಬಾ ತೊಂದರೆಯಾಗುತ್ತಿದ್ದು ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ಸಂಬಂಧಿಸಿದ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಗ್ರಾಮದ ರೈತರು ಮನವಿ ಅಪರ್ಿಸಿದ್ದಾರೆ.
ರೈತರೇ ದೇಶದ ಬೆನ್ನೆಲುಬು ಎಂದು ಉದ್ದುದ್ದ ಭಾಷಣ ಮಾಡುವ ರಾಜಕಾರಿಣಿಗಳೂ ಸಹಿತ ರೈತರ ನೆರವಿಗೆ ಈಗಲಾದರೂ ಬರಬೇಕು, ಜೊತೆಗೆ ಕೃಷಿ ಭೂಮಿಯನ್ನು ಅವಲಂಬಿಸಿ ಬದುಕುತ್ತಿರುವ ರೈತರು ಹಲವಾರು ತಿಂಗಳುಗಳಿಂದ ಬೆಳೆಗೆ ನೀರನ್ನು ಹಾಯಿಸಲು ಹೆಸ್ಕಾಂ ಇಲಾಖೆ ವಿದ್ಯುತ್ ವ್ಯತ್ಯವನ್ನು ಮಾಡುತ್ತಿದ್ದು ಇದು ಆ ಭಾಗದ ರೈತರಿಗೆ ತುಂಬಾ ತೊಂದರೆಯಾಗಿದೆ ಅಲ್ಲದೇ ರೈತರ ಆರೋಗ್ಯ ಮತ್ತು ಜೀವನ ಶೈಲಿಯ ದೃಷ್ಟಿಯಿಂದ ಹಗಲಿನಲ್ಲಿಯೂ ವಿದ್ಯುತ್ ಪೂರೈಸಿ ಒಂದು ಬಲ್ಬ್ ನಿರಂತರವಾಗಿ ಬೋರಿನ ಮನೆ ಬಳಸಿಕೊಳ್ಳಲು ಅವಕಾಶ ಮಾಡಿ ಕೊಡುವಂತೆ ಮನವಿಯಲ್ಲಿ ತಿಳಿಸಲಾಗಿದೆ, ಇಲ್ಲವಾದರೆ ಉಗ್ರ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಜುನಾಥ ಹಂಚಿಮನಿ, ರುದ್ರಗೌಡ ಅತ್ತಿಮರ, ಶಂಕರಣ್ಣ ನೀರಲಗಿ, ಪ್ರಕಾಶ ಶಿಗ್ಗಾವಿ, ಗುರು ಧರಣೆಪ್ಪನವರ, ಪರಶುರಾಮ ವಾಲಿಕಾರ, ಶಂಕ್ರಪ್ಪ ಕುಂಬಾರ, ಸಿದ್ದಪ್ಪ ಮಿಜರ್ಿ, ಹೊನ್ನಪ್ಪ ಮಾನವಿ, ಚನ್ನಪ್ಪ ಕುಬಸದ, ತಿಪ್ಪಯ್ಯ ಬಳಗಲಿ, ಶಿದ್ದಪ್ಪ ಚಾಕಲಬ್ಬಿ, ಮಾದೆಗೌಡ ಪಾಟೀಲ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ರೈತರು ಇದ್ದರು.
ಫೋಟೋ ಪೈಲ್ : ತಾಲೂಕಿನ ವಿವಿಧ ಗ್ರಾಮಗಳ ನೀರಾವರಿ ಕೃಷಿ ಅವಲಂಬಿತ ರೈತರಿಗೆ ವಿದ್ಯುತ್ನಲ್ಲಿ ತೊಂದರೆಯಾಗುತ್ತಿದ್ದು ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಸರಬರಾಜು ಮಾಡುವಂತೆ ಅಗ್ರಹಿಸಿ ಸಂಬಂಧಿಸಿದ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ರೈತರು ಮನವಿ ಅಪರ್ಿಸಿದರು.
ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವಂತೆ ಅಧಿಕಾರಿಗಳಿಗೆ ತ್ರಿಲೋಕಚಂದ್ರ ಸೂಚನೆ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 