ರೈತರು ನರಳುತ್ತಿದ್ದಾರೆ, ಆದರೆ ದೆಹಲಿ ವೈಭವೀಕರಣಕ್ಕೆ ಸರ್ಕಾರ ಮುಂದಾಗಿದೆ : ಪ್ರಿಯಾಂಕಾ
ನವದೆಹಲಿ, ಅ 26: ಸಂಸತ್ತಿನಿಂದ ಇಂಡಿಯಾ ಗೇಟ್ ವರೆಗಿನ ಪ್ರದೇಶದ ವೈಭವೀಕರಣಕ್ಕೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ 12,750 ಕೋಟಿ ರೂ ಗಳನ್ನು ನೀಡಲು ಮುಂದಾಗಿದೆ, ಆದರೆ ಕಬ್ಬು ಬೆಳೆಗಾರರ 7000 ರೂ ಬಾಕಿ ಪಾವತಿಸಲು ನಿರಾಕರಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗಾ ಗಾಂಧಿವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಗಳಲ್ಲಿ ಅವರು, ದೆಹಲಿಯ ಐತಿಹಾಸಿಕ ಭವ್ಯ ಪ್ರದೇಶವಾದ ಸಂಸತ್ ನಿಂದ ಇಂಡಿಯಾ ಗೇಟ್ ವರೆಗಿನ ಪ್ರದೇಶದ ಅಂದ ಚೆಂದ ಹೆಚ್ಚಿಸಲು ಗುಜರಾತ್ ಕಂಪೆನಿಗೆ ಗುತ್ತುಗೆ ನೀಡಿದ್ದಾರೆ. ರೈತರ ಬಾಕಿ ಪಾವತಿಸಲು ಕ್ರಮ ಕೈಗೊಳ್ಳುವ ಬದಲು ಸೌಂದರೀಕರಣಕ್ಕೆ ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಆರೋಪಿಸಿದ್ದಾರೆ.
ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮುಂದೊಂದು ದಿನ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಹಮದಾಬಾದ್ ಮೂಲದ ಕಂಪೆನಿಗೆ ದೆಹಲಿಯ ಐತಿಹಾಸಿಕ ಪ್ರದೇಶಕ್ಕೆ ಹೊಸ ರೂಪ. ನೀಡುವ ಸಂಬಂಧ ಟೆಂಡರ್ ನೀಡಿರುವುದಾಗಿ ಶುಕ್ರವಾರವಷ್ಟೇ ಸರ್ಕಾರ ತಿಳಿಸಿತ್ತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 