ರೈತರು ನರಳುತ್ತಿದ್ದಾರೆ, ಆದರೆ ದೆಹಲಿ ವೈಭವೀಕರಣಕ್ಕೆ ಸರ್ಕಾರ ಮುಂದಾಗಿದೆ : ಪ್ರಿಯಾಂಕಾ
ನವದೆಹಲಿ, ಅ 26: ಸಂಸತ್ತಿನಿಂದ ಇಂಡಿಯಾ ಗೇಟ್ ವರೆಗಿನ ಪ್ರದೇಶದ ವೈಭವೀಕರಣಕ್ಕೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ 12,750 ಕೋಟಿ ರೂ ಗಳನ್ನು ನೀಡಲು ಮುಂದಾಗಿದೆ, ಆದರೆ ಕಬ್ಬು ಬೆಳೆಗಾರರ 7000 ರೂ ಬಾಕಿ ಪಾವತಿಸಲು ನಿರಾಕರಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗಾ ಗಾಂಧಿವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಗಳಲ್ಲಿ ಅವರು, ದೆಹಲಿಯ ಐತಿಹಾಸಿಕ ಭವ್ಯ ಪ್ರದೇಶವಾದ ಸಂಸತ್ ನಿಂದ ಇಂಡಿಯಾ ಗೇಟ್ ವರೆಗಿನ ಪ್ರದೇಶದ ಅಂದ ಚೆಂದ ಹೆಚ್ಚಿಸಲು ಗುಜರಾತ್ ಕಂಪೆನಿಗೆ ಗುತ್ತುಗೆ ನೀಡಿದ್ದಾರೆ. ರೈತರ ಬಾಕಿ ಪಾವತಿಸಲು ಕ್ರಮ ಕೈಗೊಳ್ಳುವ ಬದಲು ಸೌಂದರೀಕರಣಕ್ಕೆ ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಆರೋಪಿಸಿದ್ದಾರೆ.
ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮುಂದೊಂದು ದಿನ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಹಮದಾಬಾದ್ ಮೂಲದ ಕಂಪೆನಿಗೆ ದೆಹಲಿಯ ಐತಿಹಾಸಿಕ ಪ್ರದೇಶಕ್ಕೆ ಹೊಸ ರೂಪ. ನೀಡುವ ಸಂಬಂಧ ಟೆಂಡರ್ ನೀಡಿರುವುದಾಗಿ ಶುಕ್ರವಾರವಷ್ಟೇ ಸರ್ಕಾರ ತಿಳಿಸಿತ್ತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 