ರೈತರು ಆತುರ ಪಡಬೇಡಿ, ಅಪಪ್ರಚಾರಕ್ಕೆ ಕಿವಿಗೊಟ್ಟು ಫಸಲು ಬೆಳೆ ನಾಶ ಮಾಡಬೇಡಿ: ಬಿ.ಸಿ.ಪಾಟೀಲ್ ಮನವಿ
ಬೆಂಗಳೂರು, ಏ.1, ರೈತರು ತಮ್ಮ ಬೆಳೆಗಳನ್ನು ರಸ್ತೆಗೆ ಚೆಲ್ಲುವುದಾಗಲೀ ನಾಶ ಮಾಡುವುದಾಗಲೀ ಮಾಡಬಾರದು. ಕೊರೋನಾ ರೋಗ ಜಗತ್ತಿಗೆ ಎದುರಾದ ಸಮಸ್ಯೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಹೀಗಾಗಿ ರೈತರು ಆತುರಕ್ಕೊಳಗಾಗದೇ ಸ್ವಲ್ಪ ತಾಳ್ಮೆವಹಿಸಿ ಇಲಾಖೆ ನೀಡಿದ ಕ್ರಮ ಅನುಸರಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಿಗೆ ಮನವಿ ಮಾಡಿದ್ದಾರೆ.ರಾಯಚೂರು ಸೇರಿದಂತೆ ಬೇರೆ ಯಾವುದೇ ಭಾಗದಲ್ಲಿ ರೈತರ ಬೆಳೆ ಸಮೀಕ್ಷೆಯಾಗದೇ ಇದ್ದದ್ದು ಕಂಡುಬಂದಲ್ಲಿ ತಕ್ಷಣವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ನೀಡಿದರು.ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡಿದ ಸಚಿವರು, ಫಸಲು ಸಮೀಕ್ಷೆ ನಡೆಸಿ ಫಸಲ್ ಭೀಮಾಗೆ ಒಳಪಡಿಸಬೇಕು ಎಂದಿದ್ದಾರೆ.ರಾಯಚೂರು, ಕೊಪ್ಪಳ, ಮೈಸೂರಿನ ಕೆಲ ಭಾಗ ಸೇರಿದಂತೆ ಹಲವೆಡೆ ಬತ್ತ ಕಟಾವು ಯಂತ್ರೋಪಕರಣಕ್ಕೆ ಗಡಿಯಲ್ಲಿ ನಿಲ್ಲಿಸಬಾರದು. ರೈತರಿಗೆ ಬೇಕಾದ ಬೀಜ, ಗೊಬ್ಬರ ಔಷಧಿ ಮಾರಾಟಕ್ಕೆ ಮುಕ್ತ ಅವಕಾಶ ಪೈಪ್ ಅಂಗಡಿಗಳನ್ನುತೆರಯಲು ಮಾರಾಟ ಮಾಡಲು ಯಾವುದೇ ಅಡೆತಡೆಯಿಲ್ಲ. ಮುಂಗಾರು ಬಿತ್ತನೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಾ ದಿನಸಿ ತರಕಾರಿ ಅಂಗಡಿ ತೆರೆದಿವೆ. ರೈತರ ಜೀವ ಕುಟುಂಬದ ಹೊಣೆ ಅವರ ಮೇಲೆ ಇರುವುದರಿಂದ ರೈತರು ಮುಗಿಬೀಳದೇ ಆರೋಗ್ಯದ ಮೇಲೆ ಕಾಳಜಿ ಹೊಂದಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕು ಎಂದು ಸಚಿವರು ಸ್ಪಷ್ಟಪಡಿಸಿದರು.ರೈಲ್ವೆ ಗೂಡ್ಸ್ ಮೂಲಕ ಸಾಗಾಣಿಕೆ ಮಾಡಬಹುದು.
ಹಣ್ಣುಗಳನ್ನು ತಿನ್ನುವುದರಿಂದ ಖಾಯಿಲೆ ಬರುವುದಿಲ್ಲ. ಕಲ್ಲಂಗಡಿ ಹಣ್ಣಾಗಲೀ ಅನಾನಸ್ ಆಗಲಿ ತಿಂದರೆ ಕೊರೊನಾ ಬರುವುದಿಲ್ಲ. ತಪ್ಪು ಮಾಹಿತಿ, ಅಪಪ್ರಚಾರಕ್ಕೆ ಬೆಲೆಕೊಡಬಾರದು. ನಿಂಬೆಹಣ್ಣು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿದೆ. ಕಲ್ಲಂಗಡಿ ಅನಾನಸ್ ನಿಂಬೆಹಣ್ಣು ಉಪಯೋಗಿಸುವುದು ಆರೋಗ್ಯಕ್ಕೆ ಒಳ್ಳೆಯದು. ಹಾಗಾಗಿ ಜನರು ಹೆಚ್ಚೆಚ್ಚು ಹಣ್ಣು ಬಳಸಿ ಎಂದು ಮಾಹಿತಿ ನೀಡಿದರು.ಆತುರಕ್ಕೆ ಒಳಪಟ್ಟಾಗಲಿ ಅಥವಾ ಅಪಪ್ರಚಾರಕ್ಕಾಗಲಿ ರೈತರು ಕಿವಿಕೊಡಬಾರದು. ಯಾರೂ ಆತುರಕ್ಕೆ ಬುದ್ಧಿಕೊಟ್ಟು ಬೆಳೆಗಳನ್ನು ನಾಶ ಮಾಡುವುದಾಗಲಿ ರಸ್ತೆಗೆ ಸುರಿಯುವುದಾಗಲೀ ಮಾಡಬಾರದು. ಶೀಥಲೀಕರಣ ಘಟಕ ಎಪಿಎಂಸಿ ವ್ಯವಸ್ಥೆ ಬಳಸಿಕೊಳ್ಳಬೇಕು ಎಂದು ಕೃಷಿ ಸಚಿವರು ಸ್ಪಷ್ಟಮಾಹಿತಿ ನೀಡಿದರು.ಪೊಲೀಸರಾಗಲೀ ಬೇರೆ ಯಾರೇ ಆಗಲೀ ಗ್ರೀನ್ ಪಾಸ್ ಹೊಂದಿದ ರೈತರ ಪರಿಕರ ಫಸಲು ಮಾರಾಟ ಸಾಗಾಣಿಕೆಗೆ ತಡೆ ಮಾಡುವಂತಿಲ್ಲ ಎಂದು ಸಚಿವರು ಪುನರುಚ್ಚರಿಸಿದರು.ಪಾಸ್ ಹೊಂದಿದ ಬಾಡಿಗೆ ವಾಹನಗಳನ್ನು ಸಹ ರೈತರು ಸಾಗಾಣಿಕೆಗೆ ಬಳಸಬಹುದು. ಅವಕಾಶವನ್ನು ದುರಪಯೋಗ ಮಾಡಿಕೊಳ್ಳುವ ಕೆಲ ಶಕ್ತಿಗಳಿವೆ. ದುರುದ್ದೇಶಪೂರಕ ಕೊರೊನಾ ಪರಿಸ್ಥಿತಿ ಬಳಸಿಕೊಂಡು ದುಪ್ಪಟ್ಟು ಬೆಲೆಗೆ ವಸ್ತುಗಳನ್ನು ಯಾರಾದರೂ ಮಾರಾಟ ಮಾಡಿದ್ದು ಕಂಡುಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 