ಭೂಸ್ವಾಧೀನ ಪರಿಹಾರಕ್ಕೆ ರೈತರ ಉಪವಾಸ ಧರಣಿ
Farmers hunger strike for land acquisition compensation
ಹೂವಿನ ಹಡಗಲಿ 08: ತಾಲೂಕಿನ ದಾಸನಹಳ್ಳಿ ಹಾಗೂ ಹ್ಯಾರಡಾ ಕೆರೆ ತುಂಬಿಸುವ ಯೋಜನೆಗೆ ದಶಕದ ಹಿಂದೆ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ಭೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಇಲ್ಲಿನ ಸಿಂಹಾಸನಕಟ್ಟೆಯ ಮೇಲೆ ರೈತರು ಉಪವಾಸವನ್ನು ರತ್ನ ಭಾರತ ರೈತ ಸಂಘದ ಅಧ್ಯಕ್ಷ ಚಂದ್ರ್ಪ ಕೊಡಬಾಳ ನೇತೃತ್ವದಲ್ಲಿ ಸಂತ್ರಸ್ತ ರೈತರು ಬೆಳಿಗ್ಗೆಯಿಂದ ಧರಣಿ ಆರಂಭಿಸಿದರು.
ಹ್ಯಾರಡಾ ಮತ್ತು - ದಾಸನಹಳ್ಳಿ ತೆರೆ ತುಂಬಿಸುವ ಯೋಜನೆಯ ಪೈಪ್ ಲೈನ್ ಅಳವಡಿಸಲು ಹೊಳಲು ಬೂದನೂರು ದಾಸನಹಳ್ಳಿ ಪೋತಲಕಟ್ಟಿ ಹಾಗೂ ಹ್ಯಾರಡಾ - ಗ್ರಾಮಗಳ ಸುಮಾರು 30ಎಕರೆ ಜಮೀನನ್ನು ದಶಕದ ಹಿಂದೆಸ್ವಾಧೀನಪಡಿಸಿಕೊಳ್ಳಲಾಗಿದ್ದು. ಆದರೆ ಸಂತ್ರಸ್ತರಿಗೆ ಸರಕಾರ ಇದುವರೆಗೂ ಭೂ ಪರಿಹಾರ ನೀಡಿಲ್ಲ. ಅಧಿಕಾರಿಗಳು ಬರೀ ಸಬೂಬು ಹೇಳುತ್ತಿದ್ದಾರೆ.ಜನಪ್ರತಿನಿಧಿಗಳಿಗೆ ಹಲವುಬಾರಿ ಮನವಿ ಮಾಡಿದರೂ ಯಾವ ಪ್ರಯೋಜನವಾಗಿಲ್ಲಾ. ತಕ್ಷಣ ಭೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಧರಣಿ ಹಮ್ಮಿಕೊಂಡಿದ್ದೇವೆ ಎಂದು ಮುಖಂಡ ಕೋಡಬಾಳ ಚಂದ್ರ್ಪ ಹೇಳಿದರು.ಸಂಜೆ ಧರಣಿ ಸ್ಥಳಕ್ಕೆ ಸಿಂಗಟಾಲೂರು ಏತ ನೀರಾವರಿ ಯೋಜನೆ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ರಾಘವೇಂದ್ರ ಭೇಟಿ ನೀಡಿ ಭೂ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 